ರಾಜ್ಯ

ಕರ್ನಾಟಕ ಬಜೆಟ್‌ | ಉನ್ನತ ಶಿಕ್ಷಣದ ಭೋದಕ ವರ್ಗದ ನೇಮಕಾತಿಗೆ ಅಸ್ತು

ಬೆಂಗಳೂರು : ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಇವು ಸಿಎಂ ಸಿದ್ದರಾಮಯ್ಯ ಅವರ ೧೬ನೇ ಬಜೆಟ್‌ನ ಉನ್ನತ ಶಿಕ್ಷಣಕ್ಕೆ ಘೋಷಣೆಯಾದ ಯೋಜನೆಗಳು.

ಮುಂದುವರೆದು, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

ಇತರೆ ಅಂಶಗಳು ಹೀಗಿವೆ…

  • ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
  • ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.
  • ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು.
  • ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.
  • ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.
  • ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
  • ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
  • ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ ನೀಡಲಾಗುವುದು.
  • ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.
  • KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
    134. ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು.
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

12 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

12 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

14 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

14 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

14 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

18 hours ago