ಬೆಂಗಳೂರು: ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಕರ್ನಾಟಕ ಬಂದ್ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತ್ತಿವೆ. ಬಸ್ ಓಡಾಡುತ್ತಿದ್ದರೂ ಜನ ಮಾತ್ರ ಅದಕ್ಕೆ ಹತ್ತಿಲ್ಲ. ಬಸ್ ನಿಲ್ದಾಣಗಳಲ್ಲೂ ಜನ ಇಲ್ಲ. ಆದ್ದರಿಂದ ಕನ್ನಡಿಗರಿಗಾಗಿ ಕರೆದ ಬಂದ್ ಸಂಪೂರ್ಣ ಯಶಸ್ವಿ ಆಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹೋಟೆಲ್ನವರಿಗೆ ಭಾರೀ ದುರಹಂಕಾರ ಬಂದಿದೆ. ಎಲ್ಲದೂ ಪೊಲೀಸ್ ಕೈಯಲ್ಲೇ ಇದೆ. ಯಾರೂ ಕೂಡ ತೀರ ಹತ್ತಿಕ್ಕುವ ಮಟ್ಟಕ್ಕೆ ಹೋಗಬಾರದಿತ್ತು. ಆದರೂ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದರು.
ಇನ್ನು ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರರನ್ನು ಬಂಧಿಸಿದ ಪೊಲೀಸರ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್ ಅವರು, ಯಾರು ಏನೇ ಮಾಡಿದ್ರೂ ಇವತ್ತಿನ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದರು.
ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್ಪಾತ್ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…