ಬೆಂಗಳೂರು: ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಕರ್ನಾಟಕ ಬಂದ್ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತ್ತಿವೆ. ಬಸ್ ಓಡಾಡುತ್ತಿದ್ದರೂ ಜನ ಮಾತ್ರ ಅದಕ್ಕೆ ಹತ್ತಿಲ್ಲ. ಬಸ್ ನಿಲ್ದಾಣಗಳಲ್ಲೂ ಜನ ಇಲ್ಲ. ಆದ್ದರಿಂದ ಕನ್ನಡಿಗರಿಗಾಗಿ ಕರೆದ ಬಂದ್ ಸಂಪೂರ್ಣ ಯಶಸ್ವಿ ಆಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹೋಟೆಲ್ನವರಿಗೆ ಭಾರೀ ದುರಹಂಕಾರ ಬಂದಿದೆ. ಎಲ್ಲದೂ ಪೊಲೀಸ್ ಕೈಯಲ್ಲೇ ಇದೆ. ಯಾರೂ ಕೂಡ ತೀರ ಹತ್ತಿಕ್ಕುವ ಮಟ್ಟಕ್ಕೆ ಹೋಗಬಾರದಿತ್ತು. ಆದರೂ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದರು.
ಇನ್ನು ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರರನ್ನು ಬಂಧಿಸಿದ ಪೊಲೀಸರ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್ ಅವರು, ಯಾರು ಏನೇ ಮಾಡಿದ್ರೂ ಇವತ್ತಿನ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದರು.
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…
ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…
ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…