ಬೆಂಗಳೂರು: ಇದೇ ಮಾರ್ಚ್.22ರಂದು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.22ರಂದು 7, 8 ಮತ್ತು 9ನೇ ತರಗತಿ ಪರೀಕ್ಷೆಗಳು ನಿಗದಿಯಾಗಿವೆ. ಕರ್ನಾಟಕ ಬಂದ್ ಎಂದು ಈಗ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಬಂದ್ ಇದ್ದರೂ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ. ಪರೀಕ್ಷೆ ಅದರ ಪಾಡಿಗೆ ಅದು ನಡೆಯುತ್ತದೆ ಎಂದರು.
ಇನ್ನು ಬಂದ್ ಮಾಡುವ ಹೋರಾಟಗಾರರು ಯಾರೂ ಕೂಡ ಮಕ್ಕಳಿಗೆ ಎಕ್ಸಾಂಗೆ ಹೋಗಬೇಡಿ ಎಂದು ಹೇಳಲ್ಲ. ಮಕ್ಕಳು ಗೊಂದಲ ಆಗೋದು ಬೇಡ. ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟಿಸಿದ್ದೇವೆ. ವೇಳಾಪಟ್ಟಿ ಬದಲಾವಣೆ ಆದರೆ ಕಷ್ಟ ಆಗುತ್ತದೆ ಎಂದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…