ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ಹೀಗಾಗಿ ಅಂದು ರಾಜ್ಯದಲ್ಲಿ ಏನಿರುತ್ತೆ-ಏನಿರಲ್ಲ? ಎಂಬುದರ ವಿವರ ಈ ಕೆಳಕಂಡಂತಿದೆ.
ಕರ್ನಾಟಕ ಬಂದ್ಗೆ ಓಲಾ, ಊಬರ್, ಆಟೋ ಸಂಘಗಳು ಕೂಡ ಬೆಂಬಲ ನೀಡಿವೆ. ಹೀಗಾಗಿ ಅಂದು ಓಲಾ, ಊಬರ್ ಹಾಗೂ ಆಟೋಗಳು ರಸ್ತೆಗಳಿಯುವುದಿಲ್ಲ. ಅದೇ ರೀತಿಯಾಗಿ ಕಾರ್ಮಿಕ ಪರಿಷತ್ ಸಂಪೂರ್ಣ ಬೆಂಬಲ ನೀಡಿದೆ.
ಇನ್ನು ಹೋಟೆಲ್ ಅಸೋಸಿಯೇಷನ್ನಿಂದ ನೈತಿಕ ಬೆಂಬಲ ನೀಡಿದ್ದು, ಬಂದ್ ದಿನ ಎಂದಿನಂತೆ ಹೋಟೆಲ್ಗಳು ತೆರೆದಿರುತ್ತವೆ.
ಇನ್ನು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳು ಎಂದಿನಂತೆ ಸಂಚರಿಸಲಿದ್ದು, ದೂರದ ಊರಿಗೆ ಪ್ರಯಾಣ ಬೆಳೆಸುವ ಜನರು ಯಾವುದೇ ಆತಂಕವಿಲ್ಲದೇ ಪ್ರಯಾಣ ಮಾಡಬಹುದಾಗಿದೆ.
ಅಂದಿನ ದಿನ ಆಸ್ಪತ್ರೆ, ಮೆಡಿಕಲ್, ಹಾಲು, ಅಗತ್ಯವಸ್ತುಗಳು, ಮೆಟ್ರೋ, ಕೆಎಸ್ಆರ್ಟಿಸಿ ಬಸ್ಗಳು ಇರುತ್ತವೆ. ಬಂದ್ ದಿನ ಓಲಾ, ಊಬರ್, ಆಟೋ ರಸ್ತೆಗಳಿಯಲ್ಲ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…