ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ಹೀಗಾಗಿ ಅಂದು ರಾಜ್ಯದಲ್ಲಿ ಏನಿರುತ್ತೆ-ಏನಿರಲ್ಲ? ಎಂಬುದರ ವಿವರ ಈ ಕೆಳಕಂಡಂತಿದೆ.
ಕರ್ನಾಟಕ ಬಂದ್ಗೆ ಓಲಾ, ಊಬರ್, ಆಟೋ ಸಂಘಗಳು ಕೂಡ ಬೆಂಬಲ ನೀಡಿವೆ. ಹೀಗಾಗಿ ಅಂದು ಓಲಾ, ಊಬರ್ ಹಾಗೂ ಆಟೋಗಳು ರಸ್ತೆಗಳಿಯುವುದಿಲ್ಲ. ಅದೇ ರೀತಿಯಾಗಿ ಕಾರ್ಮಿಕ ಪರಿಷತ್ ಸಂಪೂರ್ಣ ಬೆಂಬಲ ನೀಡಿದೆ.
ಇನ್ನು ಹೋಟೆಲ್ ಅಸೋಸಿಯೇಷನ್ನಿಂದ ನೈತಿಕ ಬೆಂಬಲ ನೀಡಿದ್ದು, ಬಂದ್ ದಿನ ಎಂದಿನಂತೆ ಹೋಟೆಲ್ಗಳು ತೆರೆದಿರುತ್ತವೆ.
ಇನ್ನು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳು ಎಂದಿನಂತೆ ಸಂಚರಿಸಲಿದ್ದು, ದೂರದ ಊರಿಗೆ ಪ್ರಯಾಣ ಬೆಳೆಸುವ ಜನರು ಯಾವುದೇ ಆತಂಕವಿಲ್ಲದೇ ಪ್ರಯಾಣ ಮಾಡಬಹುದಾಗಿದೆ.
ಅಂದಿನ ದಿನ ಆಸ್ಪತ್ರೆ, ಮೆಡಿಕಲ್, ಹಾಲು, ಅಗತ್ಯವಸ್ತುಗಳು, ಮೆಟ್ರೋ, ಕೆಎಸ್ಆರ್ಟಿಸಿ ಬಸ್ಗಳು ಇರುತ್ತವೆ. ಬಂದ್ ದಿನ ಓಲಾ, ಊಬರ್, ಆಟೋ ರಸ್ತೆಗಳಿಯಲ್ಲ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…