ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ.
ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡಿಸಿ, ಸದನದ ಅಂಗೀಕಾರ ಪಡೆಯಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಎರಡು ನಿರ್ಣಯ ಮಂಡಿಸಿ ಅಂಗೀಕಾರ ಪಡೆದಿದ್ದಾರೆ.
ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ, ಆ ವ್ಯವಸ್ಥೆ ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.
ಇನ್ನು ನೀಟ್ ವಿರೋಧಿಸಿ, ನೀಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ನಿರ್ಣಯ ಮಂಡಿಸಿ ಸದನದ ಅಂಗೀಕಾರ ಪಡೆದರು.
1971ರ ಜನಗಣತಿ ಆಧರಿಸಿಯೇ ಲೋಕಸಭಾ, ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ನಿರ್ಣಯಕ್ಕೆ ಅಂಗೀಕಾರ ಪಡೆಯಲಾಯಿತು.
ಬಳಿಕ ನಾಲ್ಕನೆಯದಾಗಿ ಪಾರಂಪರಿಕ ಅರಣ್ಯ ವಾಸಿಗಳ ನಿಯಮಗಳನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ಣಯ ಮಂಡಿಸಿ, ಸದನದ ಅಂಗೀಕಾರ ಪಡೆದರು.
ನಿರ್ಣಯ ಅಂಗೀಕಾರ ವೇಳೆ ಬಿಜೆಪಿ ನಾಯಕರು ರೊಚ್ಚಿಗೆದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರ ಬಗ್ಗೆ ಸದನದಲ್ಲಿ ಸಂಪೂರ್ಣ ಚರ್ಚೆ ನಡೆಸಬೇಕು. ಇದನ್ನು ಮುಂದಕ್ಕೆ ಹಾಕಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸದನದಲ್ಲೇ ಒತ್ತಾಯಿಸಿದರು.
ಆದರೂ ಆರ್.ಅಶೋಕ್ ಮಾತಿಗೆ ತಲೆಕೆಡಿಸಿಕೊಳ್ಳದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಕೇಂದ್ರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡನೆ ಮಾಡಿ ನಿರ್ಣಯ ಪಡೆಯಿತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…