ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ.
ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡಿಸಿ, ಸದನದ ಅಂಗೀಕಾರ ಪಡೆಯಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಎರಡು ನಿರ್ಣಯ ಮಂಡಿಸಿ ಅಂಗೀಕಾರ ಪಡೆದಿದ್ದಾರೆ.
ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ, ಆ ವ್ಯವಸ್ಥೆ ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.
ಇನ್ನು ನೀಟ್ ವಿರೋಧಿಸಿ, ನೀಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ನಿರ್ಣಯ ಮಂಡಿಸಿ ಸದನದ ಅಂಗೀಕಾರ ಪಡೆದರು.
1971ರ ಜನಗಣತಿ ಆಧರಿಸಿಯೇ ಲೋಕಸಭಾ, ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ನಿರ್ಣಯಕ್ಕೆ ಅಂಗೀಕಾರ ಪಡೆಯಲಾಯಿತು.
ಬಳಿಕ ನಾಲ್ಕನೆಯದಾಗಿ ಪಾರಂಪರಿಕ ಅರಣ್ಯ ವಾಸಿಗಳ ನಿಯಮಗಳನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ಣಯ ಮಂಡಿಸಿ, ಸದನದ ಅಂಗೀಕಾರ ಪಡೆದರು.
ನಿರ್ಣಯ ಅಂಗೀಕಾರ ವೇಳೆ ಬಿಜೆಪಿ ನಾಯಕರು ರೊಚ್ಚಿಗೆದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರ ಬಗ್ಗೆ ಸದನದಲ್ಲಿ ಸಂಪೂರ್ಣ ಚರ್ಚೆ ನಡೆಸಬೇಕು. ಇದನ್ನು ಮುಂದಕ್ಕೆ ಹಾಕಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸದನದಲ್ಲೇ ಒತ್ತಾಯಿಸಿದರು.
ಆದರೂ ಆರ್.ಅಶೋಕ್ ಮಾತಿಗೆ ತಲೆಕೆಡಿಸಿಕೊಳ್ಳದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಕೇಂದ್ರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡನೆ ಮಾಡಿ ನಿರ್ಣಯ ಪಡೆಯಿತು.
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…