ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ (Caste Census) ವರದಿ ಬಗ್ಗೆ ಸರ್ಕಾರದ ನಿರ್ಣಯದ ಕುರಿತು ತೀವ್ರ ಕುತೂಹಲ ನಿರ್ಮಾಣವಾಗಿದೆ.
ಜಾತಿ ಗಣತಿ ವರದಿ ಕುರಿತು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ ತೀವ್ರ ಮಹತ್ವ ಪಡೆದುಕೊಳ್ಳಲಿದೆ.
ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳದೇ ಸುರಕ್ಷಿತ ರೀತಿಯಲ್ಲಿ ಜಾತಿ ಗಣತಿ ವರದಿ ಜಾರಿ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಿಂದುಳಿದ ವರ್ಗಗಳ ಮೀಸಲಾತಿ ಪುನರ್ರಚಿಸಲು ಸಂಪುಟದಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಯಾವ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂಬ ಕುತೂಹಲ ಮನೆಮಾಡಿದೆ.
ಇನ್ನು ಜಾತಿಗಣತಿ ವರದಿಗೆ ಲಿಂಗಾಯತರು ಹಾಗೂ ಒಕ್ಕಲಿಗ ಸಮುದಾಯದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರೆ, ಹಿಂದುಳಿದ ವರ್ಗಗಳು ಈ ವರದಿ ಪರ ಪ್ರಬಲ ಬೆಂಬಲ ವ್ಯಕ್ತಪಡಿಸಿವೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಸಂಜೆ ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಕುತೂಹಲ ಮನೆಮಾಡಿದೆ.
ಇದನ್ನೂ ಓದಿ:- ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…