ಬೆಂಗಳೂರು : IAS , IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆಗೆ ದೆಹಲಿಯಲ್ಲಿ ಸಿದ್ಧತೆ ನಡೆಸುತ್ತಿರುವ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ ೧೫ ಸಾವಿರ ರೂಪಾಯಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸದ್ಯ ವಿದ್ಯಾರ್ಥಿಗಳಿಗೆ ೧೦ ಸಾವಿರ ರೂಪಾಯಿ ಕೊಡಲಾಗುತ್ತಿದ್ದು, ಇದೀಗ ೫ ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಇಂದು ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯಲ್ಲಿ ಘೋಷಿಸಲಾಯಿತು.
ಅಲ್ಲದೆ ಈ ಹಾಸ್ಟೆಲ್ ನಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ಖರೀದಿ, ಇತರೆ ಖರ್ಚು ವೆಚ್ಚಗಳನ್ನು ಭರಿಸಲು ತಿಂಗಳಿಗೆ 16 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಿದೆ. ದೆಹಲಿಯಲ್ಲಿ ನಿರ್ಮಾಣವಾಗುವ ಹಾಸ್ಟೆಲ್ನಲ್ಲಿ ಹೈಟೆಕ್ ಲೈಬ್ರರಿ ಸ್ಥಾಪಿಸಲಾಗುತ್ತಿದ್ದು, ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಕೆಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನ ಓದಗಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…