Siddaramaiah. Photo: PTI
ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ್ದ ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ತನ್ನ ಪ್ರಣಾಳಿಕೆಯಲ್ಲಿ ಇದ್ದಂತೆ ಇದೀಗ ರಾಜ್ಯಮಟ್ಟದ ಉದ್ಯೋಗ ಮೇಳ ನಡೆಸಲು ಮುಹೂರ್ತ ನಿಗದಿಪಡಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಯುವ ಜನರ ಮತ ಸೆಳೆಯಲು ರಾಜ್ಯ ಸರ್ಕಾರ ಈ ಉದ್ಯೋಗ ಮೇಳದ ಮೂಲಕ ಯೋಜನೆ ರೂಪಿಸಿದಂತಿದೆ.
ಹೌದು, ರಾಜ್ಯ ಸರ್ಕಾರ ಜನವರಿ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ನಡೆಸಲು ತೀರ್ಮಾನಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ನಡೆಸಲು 6 ಸಚಿವರ ತಂಡವನ್ನೂ ಸಹ ರಚಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಉದ್ಯೋಗದಾತರೊಂದಿಗೆ ಸಂಪರ್ಕ ಬೆಳೆಸಿ, ಈ ಕುರಿತು ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…