ಹಾಸನ: ನಗರದಲ್ಲಿ ಇಂದು ( ಮಾರ್ಚ್ 1 ) ನಗರದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಬಳಿಕ ಮಾಧ್ಯಮದವರ ಜತೆ ಮಾತನಾಡಿ ದೇಶದಲ್ಲಿ ಶೇ.18ರಷ್ಟು ಜಿಡಿಪಿ ಬೆಳವಣಿಗೆಯಾಗಿದ್ದು, ಅತಿಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿಕೆ ನೀಡಿದರು.
ಈ ಬೆಳವಣಿಗೆಗೆ ಗ್ಯಾರಂಟಿ ಯೋಜನೆಗಳ ಫಲ ಎಂಬುದನ್ನು ಅಂಕಿಅಂಶಗಳು ಹೇಳುತ್ತಿವೆ ಎಂದು ಸಹ ಸಿದ್ದರಾಮಯ್ಯ ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಖಾತೆಗೆ ಬಂದ ಹಣದಿಂದಾಗಿ ಜನರಲ್ಲಿ ಕೊಳ್ಳುವ ಶಕ್ತಿ, ಉಳಿತಾಯದ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ತೀವ್ರಗೊಂಡು ಆರ್ಥಿಕ ಪ್ರಗತಿ ಕಂಡಿದೆ ಎಂದು ಸಿದ್ದರಾಮಯ್ಯ ತಮ್ಮ ಸರ್ಕಾರದ ಯೋಜನೆಗಳನ್ನು ಸಮರ್ಥಿಸಿಕೊಂಡರು.
ಅಲ್ಲದೇ ಮುಂಬರುವ ಲೋಕಸಭೆ ಚುನಾವಣೆ ಕುರಿತೂ ಸಹ ಮಾತನಾಡಿದ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…