ರಾಜ್ಯ

ರಾಜ್ಯದಲ್ಲಿ ಕೊರೊನಾ ಉಪತಳಿ ಜೆಎನ್‌ 1 ದೃಢ; ಉಪಸಮಿತಿಯ ಮೊದಲ ಸಭೆ ನಡೆಸಿದ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಇಂದು ( ಡಿಸೆಂಬರ್‌ 26 ) ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯ ಕೊವಿಡ್‌ ಉಪ ಸಮಿತಿಯ ಸಭೆ ನಡೆದಿದೆ. ಕೊರೊನಾ ರೂಪಾಂತರಿ ಜೆಎನ್‌ 1 ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಸಭೆಯ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ಹಂಚಿಕೊಂಡಿದ್ದಾರೆ.

ನಿನ್ನೆಯ ( ಡಿಸೆಂಬರ್‌ 25 ) 60 ಸ್ಯಾಂಪಲ್‌ಗಳ ಪೈಕಿ 34 ಜೆಎನ್‌ 1 ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ ದಿನೇಶ್‌ ಗುಂಡೂರಾವ್‌ ಟೆಸ್ಟ್‌ ಹೆಚ್ಚು ಮಾಡಿದಷ್ಟು ಸೋಂಕು ಹರಡುವಿಕೆ ಗೊತ್ತಾಗಲಿದೆ, ಹೀಗಾಗಿ ಇಂದಿನಿಂದ ದಿನನಿತ್ಯ 5000 ಟೆಸ್ಟಿಂಗ್‌ಗಳನ್ನು ಮಾಡಲಿದ್ದೇವೆ ಎಂದು ತಿಳಿಸಿರು.

ಹಿಂದೆ ಆದಂತಹ ತಪ್ಪುಗಳು ಈ ಬಾರಿ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಉಪತಳಿ ಪತ್ತೆಯಾಗಿರುವುದು ಆಶ್ಚರ್ಯವೇನಲ್ಲ, ಇದನ್ನು ನಿರೀಕ್ಷೆ ಮಾಡಿದ್ದೆವು, ವಿಶ್ವ ಆರೋಗ್ಯ ಸಂಸ್ಥೆ ಇದನ್ನು ವೇರಿಯಂಟ್‌ ಆಫ್‌ ಇಂಟರೆಸ್ಟ್‌ ಎಂದು ತಿಳಿಸಿದ್ದು ರಿಸ್ಕ್‌ ಫ್ಯಾಕ್ಟರಿ ಅಡ್ವೈಸರಿ ಬಂದಿಲ್ಲ, ಇದು ಸಮಾಧಾನಕರ ವಿಷಯವಾಗಿದ್ದು, ಆದರೂ ಎಚ್ಚರಿಕೆಯ ಅಗತ್ಯವಿದೆ ಎಂದು ದಿನೇಶ್‌ ಗುಂಡೂರಾವ್ ಹೇಳಿದರು.

ಸಿಎಂ ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದು, ಅವರ ಸಲಹೆ ಮೇರೆಗೆ ಐಸಿಯು ಪರಿಶೀಲನೆ ನಡೆಸಲಿದ್ದೇವೆ, ಆಕ್ಸಿಜನ್‌ ಕೊರತೆಯಾಗದಿರಲು ಸೂಚಿಸಿದ್ದೇವೆ. 436 ಸೋಂಕಿತರ ಪೈಕಿ 400 ಜನ ಹೋಮ್‌ ಐಸೋಲೇಷನ್‌ನಲ್ಲಿದ್ದಾರೆ, 7 ಜನ ಐಸಿಯುನಲ್ಲಿದ್ದಾರೆ. ಖುದ್ದಾಗಿ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳೇ ಟ್ರ್ಯಾಕಿಂಗ್‌ ಮಾಡಲಿದ್ದಾರೆ ಎಂದು ತಿಳಿಸಿದರು.

ಇನ್ನು 4 ಆಕ್ಸಿಜನ್‌ ಕಂಟೈನರ್‌ ಖರೀದಿ ಮಾಡಲಿದ್ದೇವೆ ಎಂದು ತಿಳಿಸಿದ ಗುಂಡೂರಾವ್‌ ಇದು ಆಸ್ಪತ್ರೆಯಲ್ಲಿರುವ ಹಾಗೂ ಹೋಮ್‌ ಐಸೋಲೇಷನ್‌ ಆಗಿರುವ ಸೋಂಕಿತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಸೋಂಕಿತರು ಮೊದಲ ಹಾಗೂ ಎರಡನೇ ಡೋಸ್‌ ಪಡೆದಿದ್ದು, ಅವರಿಗೆ ಮುನ್ನೆಚ್ಚರಿಕೆಯಾಗಿ ಲಸಿಕೆ ನೀಡಲಾಗುತ್ತೆ, ಇದಕ್ಕಾಗಿ ಕೇಂದ್ರದಿಂದ ಮುನ್ನೆಚ್ಚರಿಕೆಯಾಗಿ 30 ಸಾವಿರ ವಾಕ್ಸಿನ್‌ ಕೇಳಲಾಗಿದೆ, ಸಭೆಯಲ್ಲಿ ಇದರ ಖರೀದಿಗೆ ನಿರ್ಧಾರ ಮಾಡಲಾಗಿದೆ ಎಂದೂ ಸಹ ಹೇಳಿಕೆ ನೀಡಿದರು.

 

andolana

Recent Posts

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸಫುರಾ ಖಾನ್ ಎಂಬ ಆಟೋ ಓಡಿಸುವ ಕನಸುಗಾರ್ತಿ

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…

2 hours ago

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…

2 hours ago

ಮೂಗನಕೊಪ್ಪಲಿನಲ್ಲಿ ಮಾದರಿ ಚಾಕಿ ಸಾಕಾಣಿಕಾ ಕೇಂದ್ರ

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…

2 hours ago

ಆದಾಯದ ಹಳಿಗೆ ಮರಳಿದ ಮೃಗಾಲಯ

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…

2 hours ago

ಲೆಬನಾನಿನ ನಾಶಕ್ಕೆ ಕಾರಣವಾಗುತ್ತಿರುವ ಹೆಜ್ಬುಲ್ಲಾ ಎಂಬ ದೇವರ ಪಕ್ಷ!

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…

2 hours ago