ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಸಂಜೆ ಹಿಂಪಡೆದಿದೆ.
ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.
ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಸದಸ್ಯರೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿದ್ದು, ಅಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಅವರು ತಾಂತ್ರಿಕ ವ್ಯಕ್ತಿಯಾಗಿರುತ್ತಾರೆ. ಇದು ಬಹುಕಾಲದ ಬೇಡಿಕೆಗಳಲ್ಲಿ ಒಂದಾಗಿತ್ತು. ನಮ್ಮ ಬೇಡಿಕೆಯನ್ನು ಕಾಲಮಿತಿಯಲ್ಲಿ ಪೂರೈಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರ ಮೇಟಿ ತಿಳಿಸಿದ್ದಾರೆ.
ಕಾಲಮಿತಿಯೊಳಗೆ ಬೇಡಿಕೆ ಪೂರ್ಣಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಹೀಗಾಗಿ ಸದ್ಯಕ್ಕೆ ಪ್ರತಿಭಟನೆಯನ್ನು ಮುಂದೂಡುತ್ತಿದ್ದೇವೆ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದರೆ ನಂತರ ತೀರ್ಮಾನಿಸುತ್ತೇವೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…