ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಸಂಜೆ ಹಿಂಪಡೆದಿದೆ.
ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.
ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಸದಸ್ಯರೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿದ್ದು, ಅಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಅವರು ತಾಂತ್ರಿಕ ವ್ಯಕ್ತಿಯಾಗಿರುತ್ತಾರೆ. ಇದು ಬಹುಕಾಲದ ಬೇಡಿಕೆಗಳಲ್ಲಿ ಒಂದಾಗಿತ್ತು. ನಮ್ಮ ಬೇಡಿಕೆಯನ್ನು ಕಾಲಮಿತಿಯಲ್ಲಿ ಪೂರೈಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರ ಮೇಟಿ ತಿಳಿಸಿದ್ದಾರೆ.
ಕಾಲಮಿತಿಯೊಳಗೆ ಬೇಡಿಕೆ ಪೂರ್ಣಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಹೀಗಾಗಿ ಸದ್ಯಕ್ಕೆ ಪ್ರತಿಭಟನೆಯನ್ನು ಮುಂದೂಡುತ್ತಿದ್ದೇವೆ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದರೆ ನಂತರ ತೀರ್ಮಾನಿಸುತ್ತೇವೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…