Categories: ರಾಜ್ಯ

ರಾಜ್ಯದಲ್ಲಿ ತೀವ್ರ ಬೇಸಿಗೆ: ಜಲಾಶಯಗಳ ನೀರಿನ ಮಟ್ಟ ಇಳಿಕೆ

ಬೆಂಗಳೂರು: ತೀವ್ರ ಬೇಸಿಗೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಶೇ.31ರಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.

ಪ್ರಸ್ತುತ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 277 ಟಿಎಂಸಿ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಆದರೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 193 ಟಿಎಂಸಿ ಅಡಿಯಷ್ಟು ಮಾತ್ರ ನೀರಿನ ಸಂಗ್ರಹವಿತ್ತು.

ಹೀಗಾಗಿ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿರುವ ನೀರು ಮುಂಗಾರು ಮಳೆ ಆರಂಭದವರೆಗೂ ಸಾಕಾಗಲಿದೆ. ಕುಡಿಯುವ ನೀರು, ಕೃಷಿ ಹಾಗೂ ಜಲ ವಿದ್ಯುತ್ ಉತ್ಪಾದನೆಗೆ ಸದ್ಯಕ್ಕೆ ತೊಂದರೆ ಇಲ್ಲ. ಬೇಸಿಗೆ ಇನ್ನೂ 20 ದಿನಗಳು ಇರಲಿದೆ. ನೈರುತ್ಯ ಮುಂಗಾರು ಮಳೆ ಆರಂಭಕ್ಕೆ ಇನ್ನೂ ಮೂರು ವಾರಗಳು ಬಾಕಿ ಇವೆ.

ಪೂರ್ವ ಮುಂಗಾರು ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಆದರೆ, ಜಲಾಶಯಗಳು ಹಾಗೂ ಕೆರೆ, ಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಬಂದಿಲ್ಲ.

ಕಳೆದ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದ ಪರಿಣಾಮ ರಾಜ್ಯದ ಬಹುತೇಕ ಎಲ್ಲಾ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಈ ಬಾರಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago