ಬೆಂಗಳೂರು: ತೀವ್ರ ಬೇಸಿಗೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಶೇ.31ರಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.
ಪ್ರಸ್ತುತ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 277 ಟಿಎಂಸಿ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಆದರೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 193 ಟಿಎಂಸಿ ಅಡಿಯಷ್ಟು ಮಾತ್ರ ನೀರಿನ ಸಂಗ್ರಹವಿತ್ತು.
ಹೀಗಾಗಿ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿರುವ ನೀರು ಮುಂಗಾರು ಮಳೆ ಆರಂಭದವರೆಗೂ ಸಾಕಾಗಲಿದೆ. ಕುಡಿಯುವ ನೀರು, ಕೃಷಿ ಹಾಗೂ ಜಲ ವಿದ್ಯುತ್ ಉತ್ಪಾದನೆಗೆ ಸದ್ಯಕ್ಕೆ ತೊಂದರೆ ಇಲ್ಲ. ಬೇಸಿಗೆ ಇನ್ನೂ 20 ದಿನಗಳು ಇರಲಿದೆ. ನೈರುತ್ಯ ಮುಂಗಾರು ಮಳೆ ಆರಂಭಕ್ಕೆ ಇನ್ನೂ ಮೂರು ವಾರಗಳು ಬಾಕಿ ಇವೆ.
ಪೂರ್ವ ಮುಂಗಾರು ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಆದರೆ, ಜಲಾಶಯಗಳು ಹಾಗೂ ಕೆರೆ, ಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಬಂದಿಲ್ಲ.
ಕಳೆದ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದ ಪರಿಣಾಮ ರಾಜ್ಯದ ಬಹುತೇಕ ಎಲ್ಲಾ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಈ ಬಾರಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…