ರಾಜ್ಯ

ಕೇರಳ ಸರ್ಕಾರದಂತೆ ರಾಜ್ಯ ಸರ್ಕಾರವೂ ದಿವಾಳಿಯಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಬರ ಘೋಷಣೆಯನ್ನೇ ತಡ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ದಿವಾಳಿಯಾಗಿ ಮೂರು ತಿಂಗಳು ತಡವಾಗಿ ಬರ ಘೋಷಣೆ ಮಾಡಿದೆ. ಈಗ ಹಿಂಗಾರು ಬರಗಾಲದ ಘೋಷಣೆಯನ್ನೂ ಮಾಡಿಲ್ಲ ಎಂದು ವಿಧಾನಸಭೆಯ ಪ್ರತಿಪ್ಷಕ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬರಗಾಲದ ನಿರ್ವಹಣೆಯಲ್ಲಿ ವಿಫಲವಾಗಿರುವುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದರು. ಈ ಕುರಿತು ಪತ್ರಿಕೆಗಳಲ್ಲೂ ಅನೇಕ ವರದಿಗಳು ಬಂದಿವೆ. ಆದರೆ ಬರವನ್ನು ಘೋಷಣೆ ಮಾಡಲು ಸರ್ಕಾರ ಮೂರು ತಿಂಗಳು ತೆಗೆದುಕೊಂಡಿದೆ. ಮಾಧ್ಯಮಗಳಲ್ಲಿ ವರದಿ ಬಂದಾಗ, ರೈತರು ಪ್ರತಿಭಟಿಸಿದಾಗಲೇ ಬರಗಾಲ ಘೋಷಿಸಿದ್ದರೆ ಕೇಂದ್ರ ಸರ್ಕಾರದ ತಂಡ ಬೇಗ ಬಂದು ಪರಿಶೀಲನೆ ಮಾಡುತ್ತಿತ್ತು. ಬರ ಘೋಷಣೆಯನ್ನೇ ತಡ ಮಾಡಿ ಈಗ ಕೇಂದ್ರದ ತಪ್ಪು ಎನ್ನುವ ರಾಜ್ಯ ಸರ್ಕಾರಕ್ಕೆ ಮಾನ ಇಲ್ಲ ಎಂದು ದೂರಿದರು.

ಸಚಿವ ಕೃಷ್ಣ ಬೈರೇಗೌಡರು ಅಷ್ಟೊಂದು ಪ್ರತಿಭಾವಂತರಾಗಿದ್ದರೆ ಸಂಸದರಾಗಿ ಅವರೇ ಹೋಗಿ ಪ್ರಶ್ನೆ ಕೇಳಬಹುದಿತ್ತು. ಒಬ್ಬ ರೈತರಿಗೆ 25 ಸಾವಿರ ರೂ. ನೀಡುವ ಬದಲು ಕೇವಲ 2 ಸಾವಿರ ರೂ. ನೀಡಿದ್ದೇವೆ ಎನ್ನುತ್ತಿದ್ದಾರೆ. ಅದರಲ್ಲೂ ಮೋಸ ಮಾಡಲಾಗಿದೆ. ಮತ್ತೆ ಹೊಸ ತಂತ್ರಜ್ಞಾನವೆಂದು ಅದನ್ನೂ ತಡ ಮಾಡಲಾಗಿದೆ. ಕೇಂದ್ರ ಸರ್ಕಾರದ ಹಣದಲ್ಲಿ ಬಾಕಿ ಉಳಿಸಿಕೊಂಡು ಅದೇ ಹಣವನ್ನು ನೀಡಲಾಗುತ್ತಿದೆ. ನಂತರ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ.

ಕೇರಳ ಸರ್ಕಾರದಂತೆ ಸುಪ್ರೀಂ ಕೋರ್ಟ್‌ನಲ್ಲಿ ಛೀಮಾರಿ ಹಾಕಿಸಿಕೊಳ್ಳುವುದಷ್ಟೇ ಬಾಕಿ ಉಳಿದಿದೆ. ಅಲ್ಲಿನ ಸರ್ಕಾರ ದಿವಾಳಿಯಾದಂತೆ ಇಲ್ಲೂ ಸರ್ಕಾರ ದಿವಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

900 ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಿಎಂ ಸಿದ್ದರಾಮಯ್ಯ ಅವರಿಗೆ ಕರುಣೆ ಇಲ್ಲ. ಒಂದು ವರ್ಷದಲ್ಲೇ ಫ್ರೀ ಫ್ರೀ ಎಂದು ಅಭಿವೃದ್ಧಿಗೆ ಹಣ ಇಲ್ಲ. ಒಂದು ರಸ್ತೆ, ತಾಲೂಕು ಆಸ್ಪತ್ರೆ, ಶಾಲೆ ಯಾವುದನ್ನೂ ಕಟ್ಟಿಸಿಲ್ಲ. ರಸ್ತೆಗಳನ್ನು ನೋಡಿದರೆ ಒಂದು ದೇಶದ ಆರ್ಥಿಕ ಸ್ಥಿತಿ ಹೇಗಿದೆ ಎಂದು ತಿಳಿಯುತ್ತದೆ ಎಂಬ ಮಾತಿದೆ. ಆದರೆ ರಾಜ್ಯ ಸರ್ಕಾರ ಯಾವ ರಸ್ತೆ ನಿರ್ಮಿಸಿದೆ? ಸಚಿವ ಅಮಿತ್‌ ಶಾ ಸರಿಯಾಗಿಯೇ ಹೇಳಿದ್ದು, ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡುವುದೇ ಸೂಕ್ತ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

21 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

45 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

57 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

1 hour ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

1 hour ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

1 hour ago