ರಾಜ್ಯ

ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಬದಲಾವಣೆ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ ತರಲಾಗಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಹೆಚ್ಚುವರಿಯಾಗಿ ಶೇ. 10ರಷ್ಟು ವಿದ್ಯುತ್‌ ನೀಡಲಾಗುತ್ತಿದ್ದ ಮಾನದಂಡವನ್ನು 10 ಯೂನಿಟ್‌ ಆಗಿ ಬದಲಾಯಿಸಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆಜೆ ಜಾರ್ಜ್‌ ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್‌ ವಿದ್ಯುತ್‌ ಉಚಿತ ಎಂದು ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್‌ ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20,30 ಹಾಗೂ 40 ಯೂನಿಟ್‌ ವಿದ್ಯುತ್‌ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ವಿದ್ಯುತ್‌ ನೀಡಲಾಗುತ್ತಿತ್ತು. ಅಂದರೆ ಅಂತಹ ಗ್ರಾಹಕರಿಗೆ ಕಡಿಮೆ ವಿದ್ಯುತ್‌ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುವ ಗ್ರಾಹಕರಿಗೆ 10% ಹೆಚ್ಚುವರಿ ವಿದ್ಯುತ್ ನೀಡುವ ಬದಲಾಗಿ ಹೆಚ್ಚುವರಿಯಾಗಿ 10 ಯೂನಿಟ್‌ ವಿದ್ಯುತ್‌ ನೀಡಲು ಸಚಿವ ಸಂಪುಟ ಸಮ್ಮತಿಸಿದೆ ಎಂದು ತಿಳಿಸಿದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago