ರಾಜ್ಯ

ಚಾರಣ ಪ್ರಿಯರಿಗೆ ಬೇಸರದ ಸುದ್ದಿ; ತಾತ್ಕಾಲಿಕ ನಿರ್ಬಂಧ ಹೇರಿದ ರಾಜ್ಯ ಸರ್ಕಾರ

ವಾರಾಂತ್ಯ, ಮಾಸಾಂತ್ಯದ ರಜೆಗಳು ಬಂತೆಂದರೆ ಸಾಕು ಹಸಿರಿನಿಂದ ಕೂಡಿದ ವಿವಿಧ ಬೆಟ್ಟ ಗುಡ್ಡಗಳನ್ನು ಹುಡುಕುತ್ತಾ ಚಾರಣ ಮಾಡಲು ತೆರಳುತ್ತಿದ್ದರು ನಗರವಾಸಿಗಳು. ಹೀಗೆ ಕಾಡು ಸುತ್ತಿ, ಬೆಟ್ಟದ ತುದಿಯಲ್ಲಿ ಟೆಂಟ್‌ ಹಾಕಿ ರಾತ್ರಿ ಕಳೆಯುವ ಹವ್ಯಾಸ ರೂಢಿಸಿಕೊಂಡಿದ್ದ ಚಾರಣ ಪ್ರಿಯರಿಗೆ ಇದೀಗ ರಾಜ್ಯ ಸರ್ಕಾರ ನಿರ್ಬಂಧವನ್ನು ಹೇರಿದೆ. ಪರಿಸರ ಮಾಲಿನ್ಯ, ಪ್ರವಾಸಿಗರ ನಿಯಂತ್ರಣದ ಕಾರಣವನ್ನು ನೀಡಿ ಪ್ರಾಣಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಹೌದು, ಆನ್‌ಲೈನ್‌ ಬುಕಿಂಗ್‌ ವ್ಯವಸ್ಥೆ ಇಲ್ಲದ ಟ್ರೆಕಿಂಗ್‌ ಪಾಯಿಂಟ್‌ಗಳಿಗೆ ನಿರ್ಬಂಧವನ್ನು ಹೇರಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆದೇಶವನ್ನು ಹೊರಡಿಸಿದ್ದಾರೆ. ಈ ಕುರಿತು ಪತ್ರವೊಂದನ್ನು ಹೊರಡಿಸಿರುವ ಈಶ್ವರ್‌ ಖಂಡ್ರೆ ರಾಜ್ಯದ ಯುವಜನರು ಇತ್ತೀಚೆಗೆ ಅರಣ್ಯ ವ್ಯಾಪ್ತಿಯ ಗಿರಿ ಶಿಖರಗಳಿಗೆ ಟ್ರೆಕಿಂಗ್‌ ಕೈಗೊಳ್ಳುತ್ತಿದ್ದು ಇದರಿಂದ ವಾರಾಂತ್ಯದಲ್ಲಿ ಜನದಟ್ಟಣೆ ಅಧಿಕವಾಗುತ್ತಿದೆ, ಚಾರಣಕ್ಕೆ ಬರುವವರು ಪ್ಲಾಸ್ಟಿಕ್‌ಗಳನ್ನು ಬಿಸಾಡುವುದರಿಂದ ಪರಿಸರ ಮಾಲಿನ್ಯವಾಗುತ್ತಿದೆ. ಇದರಿಂದ ವನ್ಯ ಜೀವಿಗಳಿಗೆ ಹಾನಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಜನವರಿ 26ರಂದು ಕುಮಾರಪರ್ವತ ಚಾರಣಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದು, ಇದರ ಚಿತ್ರಗಳು ವೈರಲ್‌ ಆಗಿದ್ದವು. ಈ ಅಂಶಗಳ ಕುರಿತು ಪರಿಸರ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರತಿ ವಾರಾಂತ್ಯವೂ ಬರುವ ಪ್ರವಾಸಿಗರನ್ನು ತಪಾಸಣೆ ನಡೆಸಿದ ನಿಯಂತ್ರಿಸುವುದೂ ಸಹ ಸಿಬ್ಬಂದಿಗೆ ದೊಡ್ಡ ಸವಾಲಾಗಿದ್ದು, ಆನ್‌ಲೈನ್‌ ಬುಕಿಂಗ್‌ ಇಲ್ಲದ ಎಲ್ಲಾ ಚಾರಣ ಕೇಂದ್ರಗಳಿಗೂ ತಾತ್ಕಾಲಿಕ ನಿರ್ಬಂಧಿಸುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಅಲ್ಲದೇ ಎಲ್ಲಾ ಚಾರಣ ಕೇಂದ್ರಗಳಲ್ಲೂ ಆನ್‌ಲೈನ್‌ ವ್ಯವಸ್ಥೆ ಕಲ್ಪಿಸಬೇಕಾದ ಅಗತ್ಯವಿದ್ದು, ಈ ಕೆಲಸ ಆಗುವವರೆಗೂ ಈ ನಿರ್ಬಂಧ ಇರಲಿದೆ ಎಂದೂ ಸಹ ತಿಳಿಸಲಾಗಿದೆ.

andolana

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

6 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

8 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

9 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

9 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

10 hours ago