ರಾಜ್ಯ

ಚಾರಣ ಪ್ರಿಯರಿಗೆ ಬೇಸರದ ಸುದ್ದಿ; ತಾತ್ಕಾಲಿಕ ನಿರ್ಬಂಧ ಹೇರಿದ ರಾಜ್ಯ ಸರ್ಕಾರ

ವಾರಾಂತ್ಯ, ಮಾಸಾಂತ್ಯದ ರಜೆಗಳು ಬಂತೆಂದರೆ ಸಾಕು ಹಸಿರಿನಿಂದ ಕೂಡಿದ ವಿವಿಧ ಬೆಟ್ಟ ಗುಡ್ಡಗಳನ್ನು ಹುಡುಕುತ್ತಾ ಚಾರಣ ಮಾಡಲು ತೆರಳುತ್ತಿದ್ದರು ನಗರವಾಸಿಗಳು. ಹೀಗೆ ಕಾಡು ಸುತ್ತಿ, ಬೆಟ್ಟದ ತುದಿಯಲ್ಲಿ ಟೆಂಟ್‌ ಹಾಕಿ ರಾತ್ರಿ ಕಳೆಯುವ ಹವ್ಯಾಸ ರೂಢಿಸಿಕೊಂಡಿದ್ದ ಚಾರಣ ಪ್ರಿಯರಿಗೆ ಇದೀಗ ರಾಜ್ಯ ಸರ್ಕಾರ ನಿರ್ಬಂಧವನ್ನು ಹೇರಿದೆ. ಪರಿಸರ ಮಾಲಿನ್ಯ, ಪ್ರವಾಸಿಗರ ನಿಯಂತ್ರಣದ ಕಾರಣವನ್ನು ನೀಡಿ ಪ್ರಾಣಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಹೌದು, ಆನ್‌ಲೈನ್‌ ಬುಕಿಂಗ್‌ ವ್ಯವಸ್ಥೆ ಇಲ್ಲದ ಟ್ರೆಕಿಂಗ್‌ ಪಾಯಿಂಟ್‌ಗಳಿಗೆ ನಿರ್ಬಂಧವನ್ನು ಹೇರಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆದೇಶವನ್ನು ಹೊರಡಿಸಿದ್ದಾರೆ. ಈ ಕುರಿತು ಪತ್ರವೊಂದನ್ನು ಹೊರಡಿಸಿರುವ ಈಶ್ವರ್‌ ಖಂಡ್ರೆ ರಾಜ್ಯದ ಯುವಜನರು ಇತ್ತೀಚೆಗೆ ಅರಣ್ಯ ವ್ಯಾಪ್ತಿಯ ಗಿರಿ ಶಿಖರಗಳಿಗೆ ಟ್ರೆಕಿಂಗ್‌ ಕೈಗೊಳ್ಳುತ್ತಿದ್ದು ಇದರಿಂದ ವಾರಾಂತ್ಯದಲ್ಲಿ ಜನದಟ್ಟಣೆ ಅಧಿಕವಾಗುತ್ತಿದೆ, ಚಾರಣಕ್ಕೆ ಬರುವವರು ಪ್ಲಾಸ್ಟಿಕ್‌ಗಳನ್ನು ಬಿಸಾಡುವುದರಿಂದ ಪರಿಸರ ಮಾಲಿನ್ಯವಾಗುತ್ತಿದೆ. ಇದರಿಂದ ವನ್ಯ ಜೀವಿಗಳಿಗೆ ಹಾನಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಜನವರಿ 26ರಂದು ಕುಮಾರಪರ್ವತ ಚಾರಣಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದು, ಇದರ ಚಿತ್ರಗಳು ವೈರಲ್‌ ಆಗಿದ್ದವು. ಈ ಅಂಶಗಳ ಕುರಿತು ಪರಿಸರ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರತಿ ವಾರಾಂತ್ಯವೂ ಬರುವ ಪ್ರವಾಸಿಗರನ್ನು ತಪಾಸಣೆ ನಡೆಸಿದ ನಿಯಂತ್ರಿಸುವುದೂ ಸಹ ಸಿಬ್ಬಂದಿಗೆ ದೊಡ್ಡ ಸವಾಲಾಗಿದ್ದು, ಆನ್‌ಲೈನ್‌ ಬುಕಿಂಗ್‌ ಇಲ್ಲದ ಎಲ್ಲಾ ಚಾರಣ ಕೇಂದ್ರಗಳಿಗೂ ತಾತ್ಕಾಲಿಕ ನಿರ್ಬಂಧಿಸುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಅಲ್ಲದೇ ಎಲ್ಲಾ ಚಾರಣ ಕೇಂದ್ರಗಳಲ್ಲೂ ಆನ್‌ಲೈನ್‌ ವ್ಯವಸ್ಥೆ ಕಲ್ಪಿಸಬೇಕಾದ ಅಗತ್ಯವಿದ್ದು, ಈ ಕೆಲಸ ಆಗುವವರೆಗೂ ಈ ನಿರ್ಬಂಧ ಇರಲಿದೆ ಎಂದೂ ಸಹ ತಿಳಿಸಲಾಗಿದೆ.

andolana

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago