ರಾಜ್ಯ

ಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕʼ; ಸಚಿವ ಸಂಪುಟದಲ್ಲಿ ತೀರ್ಮಾನ

ಇಂದು ( ಜನವರಿ 18 ) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ವಿಶ್ವಗುರು ಬಸವಣ್ಣನವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಬೇಕು ಎಂಬ ನಿರ್ಧಾರವನ್ನೂ ಸಹ ಮಾಡಲಾಗಿದೆ.

ಸಚಿವ ಸಂಪುಟ ಸಭೆ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಈಶ್ವರ್‌ ಖಂಡ್ರೆ ಈ ಬಗ್ಗೆ ಮಾತನಾಡಿದ್ದು, ಅಧಿಕೃತ ಘೋಷಣೆ ಹೊರಡಿಸುವುದೊಂದೇ ಬಾಕಿ ಉಳಿದಿದೆ.

ಸಚಿವ ಸಂಪುಟ ಸಭೆ ಮುಗಿದ ಬಳಿಕ ಮಾಧ್ಯಮದವರ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ತೀರ್ಮಾನಿಸಿದೆ. ಸರ್ಕಾರದ ಈ ತೀರ್ಮಾನ ಸಿಎಂ ಆದ ನನಗೆ ಅತೀವ ಹೆಮ್ಮೆ, ತೃಪ್ತಿಯನ್ನು ತಂದಿದೆ” ಎಂದು ತಿಳಿಸಿದರು.

ಇನ್ನು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ವೀರಶೈವ ಲಿಂಗಾಯತ ಸ್ವಾಮೀಜಿಗಳ ನಿಯೋಗ ಬಸವಣ್ಣನವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮನವಿ ಮಾಡಿತ್ತು.

andolana

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

8 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

14 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago