ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ,? ತಡೆಹಿಡಿದಿದ್ದೇಕೆ.? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ.? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್‌ ತಡೆಹಿಡಿದು ಕನ್ನಡ, ಕರ್ನಾಟಕವನ್ನು ಅಪಮಾನಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇನೆ.

ಸಿಎಂ ಸಿದ್ದರಾಮಯ್ಯ ವಿಧೇಯಕ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಮೂರು ಬಾರಿ ಯೂ ಟರ್ನ್‌ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿರುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.

ಅರ್ಹತೆ ಇದ್ದರೂ ಉದ್ಯೋಗವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸವಾಲು ಹಾಕಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

2 hours ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

2 hours ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

2 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

2 hours ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

2 hours ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

2 hours ago