ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ,? ತಡೆಹಿಡಿದಿದ್ದೇಕೆ.? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ.? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್‌ ತಡೆಹಿಡಿದು ಕನ್ನಡ, ಕರ್ನಾಟಕವನ್ನು ಅಪಮಾನಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇನೆ.

ಸಿಎಂ ಸಿದ್ದರಾಮಯ್ಯ ವಿಧೇಯಕ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಮೂರು ಬಾರಿ ಯೂ ಟರ್ನ್‌ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿರುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.

ಅರ್ಹತೆ ಇದ್ದರೂ ಉದ್ಯೋಗವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸವಾಲು ಹಾಕಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

9 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

13 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

13 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

14 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

14 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

14 hours ago