ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ,? ತಡೆಹಿಡಿದಿದ್ದೇಕೆ.? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ.? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್‌ ತಡೆಹಿಡಿದು ಕನ್ನಡ, ಕರ್ನಾಟಕವನ್ನು ಅಪಮಾನಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇನೆ.

ಸಿಎಂ ಸಿದ್ದರಾಮಯ್ಯ ವಿಧೇಯಕ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಮೂರು ಬಾರಿ ಯೂ ಟರ್ನ್‌ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿರುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.

ಅರ್ಹತೆ ಇದ್ದರೂ ಉದ್ಯೋಗವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸವಾಲು ಹಾಕಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago