ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ,? ತಡೆಹಿಡಿದಿದ್ದೇಕೆ.? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ.? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್‌ ತಡೆಹಿಡಿದು ಕನ್ನಡ, ಕರ್ನಾಟಕವನ್ನು ಅಪಮಾನಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇನೆ.

ಸಿಎಂ ಸಿದ್ದರಾಮಯ್ಯ ವಿಧೇಯಕ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಮೂರು ಬಾರಿ ಯೂ ಟರ್ನ್‌ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿರುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.

ಅರ್ಹತೆ ಇದ್ದರೂ ಉದ್ಯೋಗವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸವಾಲು ಹಾಕಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago