ರಾಜ್ಯ

ತಿರುಪತಿ ಲಡ್ಡು ಪ್ರಕರಣ: ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಪ್ರಸಾದ ಪರೀಕ್ಷೆಗೆ ರಾಮಲಿಂಗರೆಡ್ಡಿ ಆದೇಶ

ಬೆಂಗಳೂರು: ಆಂಧ್ರದ ತಿರುಪತಿ ತಿರುಮಲ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ವರದಿ ಹೊರಬಿದ್ದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ರಾಜ್ಯದ ಎಲ್ಲಾ ಮುಜರಾಯಿ ವ್ಯಾಪ್ತಿಗೊಳಪಡುವ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಸೂಚನೆ ನೀಡಿದೆ.

ನೆರೆ ರಾಜ್ಯ ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಬೆಳಕಿಗೆ ಬಂದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದರ ಹಿನ್ನೆಲ್ಲೆಯಲ್ಲಿ ರಾಜ್ಯದ ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಸುಮಾರು 34 ಸಾವಿರಕ್ಕೂ ಹೆಚ್ಚು ದೇವಾಲಯಗಳಿಗೂ ಪ್ರಸಾದವನ್ನು ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

ಮುಜರಾಯಿ ಇಲಾಖೆಯಲ್ಲಿ ಇಲ್ಲಿಯವರೆಗೂ 205 ದೇವಾಲಯಗಳು ವಾರ್ಷಿಕ ಆದಾಯ 25 ಲಕ್ಷ ರೂ.ಗಳಿಗಿಂತ ಅಧಿಕವಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿದೆ. ಬಿ ವರ್ಗದ 193 ದೇವಾಲಯಗಳು 5 ಲಕ್ಷದಿಂದ 25 ಲಕ್ಷದವರೆಗೆ ಆದಾಯವನ್ನು ಗಳಿಸುತ್ತವೆ. ಇನ್ನುಳಿದ ದೇವಾಲಯಗಳು 5 ಲಕ್ಷ ರೂ. ಗಳಿಸುವುದಕ್ಕೆ ಸಿ ವರ್ಗದ ದೇವಾಲಯಗಳು ಎಂದು ವರ್ಗೀಕರಿಸಲಾಗಿದೆ. ಈ ಎಲ್ಲಾ ದೇವಾಲಯಗಳು ಸಾಮಾನ್ಯವಾಗಿ ಭಕ್ತರಿಗೆ ಪ್ರಸಾದವನ್ನು ವಿತರಿಸುತ್ತವೆ.

ಪ್ರಸಾದದ ಪರೀಕ್ಷೆ ಯಾಕೆ? ಸಚಿವ ರಾಮಲಿಂಗರೆಡ್ಡಿ ಹೇಳಿರುವುದೇನು?
ಕರ್ನಾಟಕದ ದೇವಾಲಯಗಳು ಭಕ್ತರಿಗೆ ಆರೋಗ್ಯಕರ ಹಾಗೂ ಸುರಕ್ಷಿತ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಈ ಇಲಾಖೆ ವ್ಯಾಪ್ತಿಗೆ ಒಳಪಡುವ ಯಾವುದೇ ದೇವಾಲಯಗಳ ಪ್ರಸಾದದ ವಿಚಾರದಲ್ಲಿ ಜನರಿಗೆ ಯಾವುದೇ ಅನುಮಾನ ಮತ್ತು ಭಯವಿರಬಾರದು. ಆ ಕಾರಣಕ್ಕಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ಸುತ್ತೋಲೆ ಮೂಲಕ ಸೂಚಿಸಲಾಗಿದೆ ಎಂದು ಹೇಳಿದರು.

ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪವನ್ನೇ ಬಳಸಿ: ಸುತ್ತೋಲೆ
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಸರ್ಕಾರ ದೇಗುಲಗಳಲ್ಲಿ ವಿತರಿಸುವ ಪ್ರಸಾದವನ್ನು ಪರೀಕ್ಷಿಸಬೇಕು ಎಂದು ಆಗ್ರಹಿಸಿದ್ದರು. ಹೀಗಾಗಿ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಸಲು ಹಾಗೂ ದೀಪಗಳನ್ನು ಬೆಳಗಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

18 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago