ಬೆಂಗಳೂರು: ಅರ್ಜುನ ಆನೆ ಸಾವನ್ನಪ್ಪಿದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಹಾಗೂ ಅದು ವಾಸವಿದ್ದ ಹೆಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಕಾಡಾನೆ ಕಾರ್ಯಾಚರಣೆ ವೇಳೆ ತಿವಿತಕ್ಕೊಳಗಾಗಿ ಸಾವನ್ನಪ್ಪಿದ ಅರ್ಜುನ ಆನೆಯ ಸ್ಮಾರಕ ನಿರ್ಮಿಸುವಂತೆ ಪ್ರಾಣಿಪ್ರಿಯರು ಆಗ್ರಹಿಸಿದ್ದರು. ಅರ್ಜುನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತು ಅತ್ಯಂತ ಶಾಂತ ರೀತಿಯಲ್ಲಿ ಸಾಗಿದ್ದನು.
ಆದ್ದರಿಂದ ಅರ್ಜುನ ಆನೆ ಮೃತಪಟ್ಟ ದಿನದಿಂದಲೇ ಅವನಿಗೆ ಸ್ಮಾರಕ ನಿರ್ಮಾಣ ಮಾಡಲೇಬೇಕು ಎಂದು ಎಲ್ಲೆಡೆ ಆಗ್ರಹ ಕೇಳಿಬರುತ್ತಿತ್ತು. ಇನ್ನು ಅರ್ಜುನ ಆನೆ ವಾಸವಿದ್ದ ಹೆಚ್.ಡಿ.ಕೋಟೆಯ ಬಳ್ಳೆ ಶಿಬಿರದಲ್ಲೂ ಆತನ ಸ್ಮಾರಕ ನಿರ್ಮಾಣ ಮಾಡಲೇಬೇಕು ಎಂಬ ಆಗ್ರಹ ಕೇಳಿಬರುತ್ತಿತ್ತು.
ಈ ಹಿನ್ನೆಲೆಯಲ್ಲಿ ಅರ್ಜುನ ಆನೆ ಸ್ಮಾರಕ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈಗ ರಾಜ್ಯ ಸರ್ಕಾರ ಎರಡೂ ಕಡೆ ಸ್ಮಾರಕ ನಿರ್ಮಾಣ ಮಾಡಲು ಮುಂದಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗುದ್ದಲಿ ಪೂಜೆ ನೆರವೇರಿಸಲು ಸಿದ್ಧತೆ ನಡೆಸಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…