ಬೆಂಗಳೂರು: ಅರ್ಜುನ ಆನೆ ಸಾವನ್ನಪ್ಪಿದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಹಾಗೂ ಅದು ವಾಸವಿದ್ದ ಹೆಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಕಾಡಾನೆ ಕಾರ್ಯಾಚರಣೆ ವೇಳೆ ತಿವಿತಕ್ಕೊಳಗಾಗಿ ಸಾವನ್ನಪ್ಪಿದ ಅರ್ಜುನ ಆನೆಯ ಸ್ಮಾರಕ ನಿರ್ಮಿಸುವಂತೆ ಪ್ರಾಣಿಪ್ರಿಯರು ಆಗ್ರಹಿಸಿದ್ದರು. ಅರ್ಜುನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತು ಅತ್ಯಂತ ಶಾಂತ ರೀತಿಯಲ್ಲಿ ಸಾಗಿದ್ದನು.
ಆದ್ದರಿಂದ ಅರ್ಜುನ ಆನೆ ಮೃತಪಟ್ಟ ದಿನದಿಂದಲೇ ಅವನಿಗೆ ಸ್ಮಾರಕ ನಿರ್ಮಾಣ ಮಾಡಲೇಬೇಕು ಎಂದು ಎಲ್ಲೆಡೆ ಆಗ್ರಹ ಕೇಳಿಬರುತ್ತಿತ್ತು. ಇನ್ನು ಅರ್ಜುನ ಆನೆ ವಾಸವಿದ್ದ ಹೆಚ್.ಡಿ.ಕೋಟೆಯ ಬಳ್ಳೆ ಶಿಬಿರದಲ್ಲೂ ಆತನ ಸ್ಮಾರಕ ನಿರ್ಮಾಣ ಮಾಡಲೇಬೇಕು ಎಂಬ ಆಗ್ರಹ ಕೇಳಿಬರುತ್ತಿತ್ತು.
ಈ ಹಿನ್ನೆಲೆಯಲ್ಲಿ ಅರ್ಜುನ ಆನೆ ಸ್ಮಾರಕ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈಗ ರಾಜ್ಯ ಸರ್ಕಾರ ಎರಡೂ ಕಡೆ ಸ್ಮಾರಕ ನಿರ್ಮಾಣ ಮಾಡಲು ಮುಂದಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗುದ್ದಲಿ ಪೂಜೆ ನೆರವೇರಿಸಲು ಸಿದ್ಧತೆ ನಡೆಸಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…