ರಾಜ್ಯ

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ.

ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಸಕ್ತರು ಏಪ್ರಿಲ್ 15ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ ಆರ್‌ಪಿಸಿ ವಿಭಾಗಕ್ಕೆ 59 ಹುದ್ದೆಗಳು ಹಾಗೂ ಕೆಕೆಆರ್ ವಿಭಾಗಕ್ಕೆ 11 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಅವಕಾಶವಿದ್ದು, ಮಾಸಿಕ ರೂ. 44,900 ರಿಂದ 1,42,400/- ವರೆಗಿನ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ
ಈ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ ನಿಗದಿಪಡಿಸಲಾಗಿದೆ.

ಪೂರ್ವಭಾವಿ ಪರೀಕ್ಷೆ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 500/-, ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-I/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ.

ಮುಖ್ಯ ಪರೀಕ್ಷೆ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 1,500/-, ಹಾಗೂ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ರೂ. 750/- ಇರಲಿದೆ. ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಹಾಗೂ ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ Karnataka-High-Court-Recruitment-2026 ಭೇಟಿ ನೀಡಿ, ಅಧಿಸೂಚನೆಯನ್ನು ಪೂರ್ಣವಾಗಿ ಓದಿ ನಂತರ ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago