ರಾಜ್ಯ

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ.

ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಸಕ್ತರು ಏಪ್ರಿಲ್ 15ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ ಆರ್‌ಪಿಸಿ ವಿಭಾಗಕ್ಕೆ 59 ಹುದ್ದೆಗಳು ಹಾಗೂ ಕೆಕೆಆರ್ ವಿಭಾಗಕ್ಕೆ 11 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಅವಕಾಶವಿದ್ದು, ಮಾಸಿಕ ರೂ. 44,900 ರಿಂದ 1,42,400/- ವರೆಗಿನ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ
ಈ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ ನಿಗದಿಪಡಿಸಲಾಗಿದೆ.

ಪೂರ್ವಭಾವಿ ಪರೀಕ್ಷೆ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 500/-, ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-I/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ.

ಮುಖ್ಯ ಪರೀಕ್ಷೆ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 1,500/-, ಹಾಗೂ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ರೂ. 750/- ಇರಲಿದೆ. ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಹಾಗೂ ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ Karnataka-High-Court-Recruitment-2026 ಭೇಟಿ ನೀಡಿ, ಅಧಿಸೂಚನೆಯನ್ನು ಪೂರ್ಣವಾಗಿ ಓದಿ ನಂತರ ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

12 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

13 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

14 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

19 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

19 hours ago