ರಾಜ್ಯ

ಮೈಸೂರು| ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ: ಹೈಕೋರ್ಟ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಷರತ್ತು ಬದ್ಧ ಅನುಮತಿ ನೀಡಿದೆ.

ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಇಂದು(ಫೆಬ್ರವರಿ.24) ಬಿಜೆಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್‌, ಬಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಷರತ್ತು ಬದ್ಧ ನಿಯಮಗಳನ್ನು ವಿಧಿಸಿದೆ. ಅಲ್ಲದೇ ಈ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು. ಧರಣಿಯ ವೇಳೆ ವಿಡಿಯೋ ಮಾಡಬೇಕು ಎಂದು ಮೈಸೂರು ಆಯುಕ್ತರಿಗೆ ಸೂಚನೆ ನೀಡಿದೆ.

ಹೈಕೋರ್ಟ್‌ ಹೇಳಿದ್ದೇನು?

ಬಜೆಪಿ ಪ್ರತಿಭಟನೆಯನ್ನು ಇಂದು ಮಧ್ಯಾಹ್ನ 3.30 ಗಂಟೆಯ ವೇಳೆಗೆ ಫುಟ್‌ಬಾಲ್‌ ಮೈದಾನದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಧರಣಿಯಲ್ಲಿ 300 ಕ್ಕಿಂತ ಅಧಿಕ ಮಂದಿ ಸೇರುವಂತಿಲ್ಲ. ಧರಣಿ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಇನ್ನು ಪ್ರತಿಭಟನೆ ಆಯೋಜಕರಿಗೆ 1 ಲಕ್ಷ ರೂ. ದಂಡ ವಿಧಿಸಲು ತಿಳಿಸಿದ್ದು, ಪ್ರತಿಭಟನೆಯ ವೇಳೆ ಅಹಿತಕರ ಘಟನೆ ಸಂಭವಿಸಿದರೆ ಅರ್ಜಿದಾರರೇ ಹೊಣೆಯಾಗಿರುತ್ತಾರೆ ಎಂದು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

10 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

12 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

16 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago