ರಾಜ್ಯ

ಕನ್ನಡದಲ್ಲಿ ತೀರ್ಪು ನೀಡಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್‌ ಹೊಸ ಇತಿಹಾಸ ಬರೆದಿದೆ.

ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ. ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿದ ಹೈಕೋರ್ಟ್‌ ಇಂದು ಕನ್ನಡದಲ್ಲೇ ತೀರ್ಪು ನೀಡಿದೆ.

ನ್ಯಾಯಮೂರ್ತಿ ಎಸ್.ದೀಕ್ಷಿತ್‌, ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ನೀಡಿದ ಈ ತೀರ್ಪು ಭಾರತ ಭಾಷಾ ದಿನವನ್ನು ಸ್ಮರಣೀಯವಾಗಿಸಿದೆ.

ಪಟ್ಟನಾಯಕನಹಳ್ಳಿ ಮಠದ ಸ್ವಾಮೀಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಭಾಗೀಯ ಪೀಠ ಕನ್ನಡದಲ್ಲಿ ತೀರ್ಪು ನೀಡಿದೆ.

ತೀರ್ಪಿನ ಆಪರೇಟಿವ್‌ ಭಾಗವನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಕನ್ನಡದಲ್ಲಿಯೇ ಓದಿದ್ದಾರೆ.

ಕನ್ನಡ ಅವಸಾನ ಆಗಬಾರದು ಎಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲಿಯೂ ಕನ್ನಡದಲ್ಲೇ ವ್ಯವಹಾರ ನಡೆಯಬೇಕು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಪ್ರತಿಪಾದಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

4 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

34 mins ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

42 mins ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

48 mins ago

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

2 hours ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

2 hours ago