ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್ ಹೊಸ ಇತಿಹಾಸ ಬರೆದಿದೆ.
ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ. ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿದ ಹೈಕೋರ್ಟ್ ಇಂದು ಕನ್ನಡದಲ್ಲೇ ತೀರ್ಪು ನೀಡಿದೆ.
ನ್ಯಾಯಮೂರ್ತಿ ಎಸ್.ದೀಕ್ಷಿತ್, ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ನೀಡಿದ ಈ ತೀರ್ಪು ಭಾರತ ಭಾಷಾ ದಿನವನ್ನು ಸ್ಮರಣೀಯವಾಗಿಸಿದೆ.
ಪಟ್ಟನಾಯಕನಹಳ್ಳಿ ಮಠದ ಸ್ವಾಮೀಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಭಾಗೀಯ ಪೀಠ ಕನ್ನಡದಲ್ಲಿ ತೀರ್ಪು ನೀಡಿದೆ.
ತೀರ್ಪಿನ ಆಪರೇಟಿವ್ ಭಾಗವನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಕನ್ನಡದಲ್ಲಿಯೇ ಓದಿದ್ದಾರೆ.
ಕನ್ನಡ ಅವಸಾನ ಆಗಬಾರದು ಎಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲಿಯೂ ಕನ್ನಡದಲ್ಲೇ ವ್ಯವಹಾರ ನಡೆಯಬೇಕು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಪ್ರತಿಪಾದಿಸಿದ್ದಾರೆ.
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…