ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ ಕೊಲೆ ಮಾಡಿ ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ ತಿಳಿದಿರುವುದಿಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೇ ಈ ರೀತಿ ವರ್ತಿಸುತ್ತಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹೆಚ್ಚು ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲೇಬೇಕು. ಈ ಬಗ್ಗೆ ನಾವು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸಿ ಇದರ ಬಗ್ಗೆ ಸುದೀರ್ಘ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…