ರಾಜ್ಯ

ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯ ನಡೆಯುತ್ತಿವೆ: ಸಚಿವ ಪರಮೇಶ್ವರ್‌

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್‌ ಕುಮಾರ್‌ ಎಂಬಾತ ಕೊಲೆ ಮಾಡಿ ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಬೆಂಗಳೂರಿಗೆ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ ತಿಳಿದಿರುವುದಿಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೇ ಈ ರೀತಿ ವರ್ತಿಸುತ್ತಾರೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಹೆಚ್ಚು ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲೇಬೇಕು. ಈ ಬಗ್ಗೆ ನಾವು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸಿ ಇದರ ಬಗ್ಗೆ ಸುದೀರ್ಘ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

10 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

10 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

10 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

10 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

10 hours ago