ಬೆಂಗಳೂರು: ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗಿನಿಂದ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ರಾಜ್ಯದಂತೆ ಕರ್ನಾಟಕವೂ ಕೂಡ ದರೋಡೆಕೋರರ ರಾಜ್ಯವಾಗುತ್ತಿದೆ. ಬೀದರ್ನಲ್ಲಿ ಹಾಡಹಗಲೇ ಎಸ್ಬಿಐ ಬ್ಯಾಂಕ್ ಮುಖ್ಯ ಕಚೇರಿಯ ಮುಂದೆಯೇ ದರೋಡೆ ನಡೆದಿದೆ. ಇಲ್ಲಿ ದರೋಡೆ ನಡೆಸಿ ದುಷ್ಕರ್ಮಿಗಳು ಆರಾಮಾಗಿ ವಿಮಾನ ರೈಲುಗಳಲ್ಲಿ ಹೋಗುತ್ತಿದ್ದಾರೆ. ಪೊಲೀಸರು ಬೀಟ್ನಲ್ಲಿ ಇದ್ದರು ಯಾರನ್ನು ಬಂಧಿಸಿಲ್ಲ. ಸಿದ್ದರಾಮಯ್ಯ ಈ ದರೋಡೆಗಳ ಕುರಿತು ಪೊಲೀಸ್ ಅಧಿಕಾರಿಗಳ ಸಭೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಪೊಲೀಸರು ರಾಜ್ಯದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಒಡಕು ಜಾಸ್ತಿಯಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಚಿವರು, ನಾಯಕರು ಡಿನ್ನರ್ ಮೀಟಿಂಗ್ ಎಂದು ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದ ಜನತೆಯ ಸುರಕ್ಷತೆ ಬಗ್ಗೆ ಇವರಿಗೆ ಕಾಳಜಿ ಇಲ್ಲ. ಇನ್ನಾದರೂ ಕುರ್ಚಿ ಜಗಳ ಬಿಟ್ಟು ಕೆಲಸ ಮಾಡಿ ಎಂದು ಆರ್.ಅಶೋಕ್ ಆಡಳಿತ ಪಕ್ಷದ ವಿರುದ್ಧ ಗುಡುಗಿದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…