ರಾಜ್ಯ

ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ: ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್‌ ಕಿಡಿ

ಬೆಂಗಳೂರು: ಸತ್ಯಕ್ಕಾಗಿ ಸಿಂಹಾಸನವನ್ನೇ ತೃಣದಂತೆ ಕಂಡಿದ್ದ ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ. ಆ ಪುಣ್ಯ ಪುರುಷರ ಹೆಸರಿಗೆ ಮಸಿ ಬಳಿದು ಪಾಪ ಕಟ್ಟಿಕೊಳ್ಳಬೇಡಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್‌ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಸತ್ಯ ನಮ್ಮಪ್ಪನ ಮನೆ ಜಹಗೀರು ಎಂದು ಪೋಸು ಕೊಡುತ್ತಿರುವ ಸಚಿವ ಚಲುವರಾಯಸ್ವಾಮಿ ಅವರೇ ಸುಳ್ಳು ಹೇಳುವುದನ್ನು, ಹಬ್ಬಿಸುವುದನ್ನು ನಿಲ್ಲಿಸಿ. ಹಿಟ್ಲರನ ಮಂತ್ರಿ ಗೋಬೆಲ್ ಚಾಳಿ ಬಿಡಿ ಎಂದು ವಾಗ್ದಾಳಿ ನಡೆಸಿದೆ.

ಮಾಜಿ ಸಂಸದೆ ಸುಮಲತಾ ಅವರು ಬಳಸಿದ್ದ ಕಾರು ಬಳಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆಯೇ? ಒಂದು ವೇಳೆ ಹೇಳಿದ್ದರೆ ಎಲ್ಲಿ, ಯಾವಾಗ, ಯಾರಿಗೆ ಹೇಳಿದ್ದರು? ಅಥವಾ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪತ್ರವನ್ನೀನಾದರೂ ಬರೆದಿದ್ದರೇ? ನೀವು ದಾಖಲೆ ಸಮೇತ ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಸದರಿಗೆ ಕೊಡಲಾಗುವ ಕಾರಿನ ಮೇಲೆ ಯಾರ ಮಾಲಿಕತ್ವವೂ ಇರುವುದಿಲ್ಲ. ಅದು ಹಿಂದಿನ ಸಂಸದರದೂ ಅಲ್ಲ, ಈಗಿನ ಸಂಸದರದೂ ಅಲ್ಲ ಎಂಬ ಸಾಮಾನ್ಯ ತಿಳಿವಳಿಕೆ ಸಂಪುಟ ದರ್ಜೆ ಸಚಿವರಾದ ನಿಮಗಿಲ್ಲವಲ್ಲ. ರಾಜ್ಯದ ಎಲ್ಲಾ ಸಂಸದರಿಗೂ ಕಾಂಗ್ರೆಸ್‌ ಸರ್ಕಾರದ ವತಿಯಿಂದ ಹೊಸ ಕಾರುಗಳನ್ನು ಕೊಡಲಾಯಿತು. ಆದರೆ, ಮಂಡ್ಯ ಮತ್ತು ಕೋಲಾರದ ಸಂಸದರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಮಲ್ಲೇಶ್ ಬಾಬು ಅವರಿಗೆ ಹಳೆಯ ಕಾರುಗಳನ್ನು ಕೊಡಲಾಯಿತು. ಎಂದು ಯಾಕೆ ಹೇಳುತ್ತೀರಾ ಚೆಲುವರಾಯಸ್ವಾಮಿ ಅವರೇ? ಎಂದು ಆಕ್ರೋಶ ವ್ಯಕ್ಯಪಡಿಸಿದೆ.

ಐದು ವರ್ಷಗಳ ಹಳೆಯ ಕಾರಿನ ಬದಲು ಹೊಸ ಕಾರು ಕೊಡಿ ಎಂದು ಕೇಂದ್ರ ಸಚಿವರು ಕೇಳಿದ್ದರು. ಅದರಲ್ಲಿ ತಪ್ಪೇನಿದೆ? ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ ಹೊಸ ಕಾರುಗಳ ಕಥೆ ಹೊಸದಲ್ಲ, ನಿಮ್ಮ ಕಾರುಬಾರು ಕೂಡ ಜೋರಾಗಿ ನಡೆದಿದೆಯಲ್ಲ ? ಎಂದು ತಿರುಗೇಟು ನೀಡಿದೆ.

ಅರ್ಚನ ಎಸ್‌ ಎಸ್

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

3 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

3 hours ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

3 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

4 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

4 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

4 hours ago