ಬೆಂಗಳೂರು: ಸತ್ಯಕ್ಕಾಗಿ ಸಿಂಹಾಸನವನ್ನೇ ತೃಣದಂತೆ ಕಂಡಿದ್ದ ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ. ಆ ಪುಣ್ಯ ಪುರುಷರ ಹೆಸರಿಗೆ ಮಸಿ ಬಳಿದು ಪಾಪ ಕಟ್ಟಿಕೊಳ್ಳಬೇಡಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಸತ್ಯ ನಮ್ಮಪ್ಪನ ಮನೆ ಜಹಗೀರು ಎಂದು ಪೋಸು ಕೊಡುತ್ತಿರುವ ಸಚಿವ ಚಲುವರಾಯಸ್ವಾಮಿ ಅವರೇ ಸುಳ್ಳು ಹೇಳುವುದನ್ನು, ಹಬ್ಬಿಸುವುದನ್ನು ನಿಲ್ಲಿಸಿ. ಹಿಟ್ಲರನ ಮಂತ್ರಿ ಗೋಬೆಲ್ ಚಾಳಿ ಬಿಡಿ ಎಂದು ವಾಗ್ದಾಳಿ ನಡೆಸಿದೆ.
ಮಾಜಿ ಸಂಸದೆ ಸುಮಲತಾ ಅವರು ಬಳಸಿದ್ದ ಕಾರು ಬಳಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆಯೇ? ಒಂದು ವೇಳೆ ಹೇಳಿದ್ದರೆ ಎಲ್ಲಿ, ಯಾವಾಗ, ಯಾರಿಗೆ ಹೇಳಿದ್ದರು? ಅಥವಾ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪತ್ರವನ್ನೀನಾದರೂ ಬರೆದಿದ್ದರೇ? ನೀವು ದಾಖಲೆ ಸಮೇತ ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಸಂಸದರಿಗೆ ಕೊಡಲಾಗುವ ಕಾರಿನ ಮೇಲೆ ಯಾರ ಮಾಲಿಕತ್ವವೂ ಇರುವುದಿಲ್ಲ. ಅದು ಹಿಂದಿನ ಸಂಸದರದೂ ಅಲ್ಲ, ಈಗಿನ ಸಂಸದರದೂ ಅಲ್ಲ ಎಂಬ ಸಾಮಾನ್ಯ ತಿಳಿವಳಿಕೆ ಸಂಪುಟ ದರ್ಜೆ ಸಚಿವರಾದ ನಿಮಗಿಲ್ಲವಲ್ಲ. ರಾಜ್ಯದ ಎಲ್ಲಾ ಸಂಸದರಿಗೂ ಕಾಂಗ್ರೆಸ್ ಸರ್ಕಾರದ ವತಿಯಿಂದ ಹೊಸ ಕಾರುಗಳನ್ನು ಕೊಡಲಾಯಿತು. ಆದರೆ, ಮಂಡ್ಯ ಮತ್ತು ಕೋಲಾರದ ಸಂಸದರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಮಲ್ಲೇಶ್ ಬಾಬು ಅವರಿಗೆ ಹಳೆಯ ಕಾರುಗಳನ್ನು ಕೊಡಲಾಯಿತು. ಎಂದು ಯಾಕೆ ಹೇಳುತ್ತೀರಾ ಚೆಲುವರಾಯಸ್ವಾಮಿ ಅವರೇ? ಎಂದು ಆಕ್ರೋಶ ವ್ಯಕ್ಯಪಡಿಸಿದೆ.
ಐದು ವರ್ಷಗಳ ಹಳೆಯ ಕಾರಿನ ಬದಲು ಹೊಸ ಕಾರು ಕೊಡಿ ಎಂದು ಕೇಂದ್ರ ಸಚಿವರು ಕೇಳಿದ್ದರು. ಅದರಲ್ಲಿ ತಪ್ಪೇನಿದೆ? ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ ಹೊಸ ಕಾರುಗಳ ಕಥೆ ಹೊಸದಲ್ಲ, ನಿಮ್ಮ ಕಾರುಬಾರು ಕೂಡ ಜೋರಾಗಿ ನಡೆದಿದೆಯಲ್ಲ ? ಎಂದು ತಿರುಗೇಟು ನೀಡಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…