ರಾಜ್ಯ

ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ: ಜೆಡಿಎಸ್‌ ವಾಗ್ದಾಳಿ

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ನಿನ್ನೆ(ಡಿ.29) ಕೆಎಎಸ್‌ ಮರುಪರೀಕ್ಷೆ ನಡೆದಿದ್ದು, ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ಹಲವಾರು ತಪ್ಪುಗಳು ಕಂಡುಬಂದಿವೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ ಎಂದು ಜೆಡಿಎಸ್‌ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಎಡವಟ್ಟು
ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆ ಇಲ್ಲವಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಹೊಣೆಗೇಡಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಎಂದು ಕಿಡಿಕಾರಿದೆ.

ಪ್ರಶ್ನೆಪತ್ರಿಕೆಗಳ ಭಾಷಾಂತರದಲ್ಲಿ ಗೊಂದಲದಿಂದ ಮುಂದೂಡಿಕೆಯಾಗಿ ಭಾನುವಾರ(ಡಿ.29) ನಡೆದ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯಲ್ಲಿಯೂ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಎಡವಟ್ಟು ಮಾಡಿದೆ. ಕೆಎಎಸ್‌ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ನೂರಾರು ತಪ್ಪುಗಳು ಕಂಡು ಬಂದಿದ್ದು, ಕನ್ನಡ ಭಾಷಾಂತರದಲ್ಲಿಯೂ ಹಲವು ದೋಷಗಳು ಪತ್ತೆಯಾಗಿದೆ. ಅಲ್ಲದೇ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಮತ್ತು ಒಎಂಆರ್ ಶೀಟ್ ಸಂಖ್ಯೆ ಅದಲು-ಬದಲಾಗಿದ್ದು, ಕೆಪಿಎಸ್‌ಸಿ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಬೌದ್ಧಿಕ ದಿವಾಳಿತನವನ್ನು ಜಗಜ್ಜಾಹೀರು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕೆಎಎಸ್‌ ಪರೀಕ್ಷೆಗೆ ನಡೆಸಲು ಕೆಪಿಎಸ್‌ಸಿ ಒಟ್ಟು 28 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದೆ. ಆದರೆ ಪದೇಪದೇ ತಪ್ಪು ಮಾಡುತ್ತಿರುವ ಕೆಪಿಎಸ್‌ ಸಿ (KPSC)ಯನ್ನು ಸುಧಾರಣೆ ಮಾಡಲು ಸಾಧ್ಯವಾಗದಷ್ಟು ದುರ್ಬಲವಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದಿಂದ ರಾಜ್ಯದ ಸುಧಾರಣೆ ಸಾಧ್ಯವೇ ? ಎಂದು ಪ್ರಶ್ನಿಸಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

44 mins ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

46 mins ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

48 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

50 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

4 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

4 hours ago