ರಾಜ್ಯ

ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ: ಜೆಡಿಎಸ್‌ ವಾಗ್ದಾಳಿ

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ನಿನ್ನೆ(ಡಿ.29) ಕೆಎಎಸ್‌ ಮರುಪರೀಕ್ಷೆ ನಡೆದಿದ್ದು, ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ಹಲವಾರು ತಪ್ಪುಗಳು ಕಂಡುಬಂದಿವೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ ಎಂದು ಜೆಡಿಎಸ್‌ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಎಡವಟ್ಟು
ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆ ಇಲ್ಲವಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಹೊಣೆಗೇಡಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಎಂದು ಕಿಡಿಕಾರಿದೆ.

ಪ್ರಶ್ನೆಪತ್ರಿಕೆಗಳ ಭಾಷಾಂತರದಲ್ಲಿ ಗೊಂದಲದಿಂದ ಮುಂದೂಡಿಕೆಯಾಗಿ ಭಾನುವಾರ(ಡಿ.29) ನಡೆದ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯಲ್ಲಿಯೂ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಎಡವಟ್ಟು ಮಾಡಿದೆ. ಕೆಎಎಸ್‌ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ನೂರಾರು ತಪ್ಪುಗಳು ಕಂಡು ಬಂದಿದ್ದು, ಕನ್ನಡ ಭಾಷಾಂತರದಲ್ಲಿಯೂ ಹಲವು ದೋಷಗಳು ಪತ್ತೆಯಾಗಿದೆ. ಅಲ್ಲದೇ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಮತ್ತು ಒಎಂಆರ್ ಶೀಟ್ ಸಂಖ್ಯೆ ಅದಲು-ಬದಲಾಗಿದ್ದು, ಕೆಪಿಎಸ್‌ಸಿ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಬೌದ್ಧಿಕ ದಿವಾಳಿತನವನ್ನು ಜಗಜ್ಜಾಹೀರು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕೆಎಎಸ್‌ ಪರೀಕ್ಷೆಗೆ ನಡೆಸಲು ಕೆಪಿಎಸ್‌ಸಿ ಒಟ್ಟು 28 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದೆ. ಆದರೆ ಪದೇಪದೇ ತಪ್ಪು ಮಾಡುತ್ತಿರುವ ಕೆಪಿಎಸ್‌ ಸಿ (KPSC)ಯನ್ನು ಸುಧಾರಣೆ ಮಾಡಲು ಸಾಧ್ಯವಾಗದಷ್ಟು ದುರ್ಬಲವಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದಿಂದ ರಾಜ್ಯದ ಸುಧಾರಣೆ ಸಾಧ್ಯವೇ ? ಎಂದು ಪ್ರಶ್ನಿಸಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

7 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

7 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

7 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

7 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

7 hours ago