ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್ ಸರ್ಕಾರ ಒತ್ತಾಯಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವೂ, ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದೆ. ಬಾಕಿ ಉಳಿಸಿಕೊಂಡಿರುವ ಪಿಎಫ್ ಹಣ, 38 ತಿಂಗಳ ಆರಿಯರ್ಸ್ ಮತ್ತು ಗ್ಯಾಚ್ಯುಟಿ ಹಣವನ್ನು ಪಾವತಿಸುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
ಇನ್ನು ಡಿಸೆಂಬರ್ 30ರ ಒಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ, ರಾಜ್ಯವ್ಯಾಪಿ ಸರ್ಕಾರಿ ಬಸ್ ಸೇವೆ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ಹೀಗಾಗಿ ರಾಜ್ಯ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂದು ಆಗ್ರಹಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…