ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಮುನ್ನ ದಿನವೇ ಲಕ್ಷಾಂತರ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ತೆ ನೌಕರರು ಮುಷ್ಕರ ನಡೆಸಲಿದ್ದಾರೆ.
ಕಳೆದ 36 ತಿಂಗಳಿನಿಂದ ಬಾಕಿ ಉಳಿದಿರುವ 1750 ಕೋಟಿ ರೂಗಳ ಬಾಕಿ ಪಾವತಿ ಬಿಡುಗಡೆ ಮಾಡಬೇಕು. ಮೂಲ ವೇತನಕ್ಕೆ ಶೇಕಡಾ.25ರಷ್ಟು ವೇತನ ಹೆಚ್ಚಿಸಿ, ಶೇಕಡಾ 31ರಷ್ಟು ತುಟ್ಟಿ ಭತ್ಯೆ ವಿಲೀನಗೊಳಿಸಿ ವೇತನ ಶ್ರೇಣಿ ಸಿದ್ಧಪಡಿಸಬೇಕು. ಪ್ರತೀ ತಿಂಗಳು 2000 ರೂ ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಬೇಕು. ಶಕ್ತಿ ಯೋಜನೆಯಿಂದ ಆಗುತ್ತಿರುವ ಶಿಕ್ಷೆ, ಕಿರುಕುಳ ಸಮಸ್ಯೆ ಪರಿಹರಿಸಬೇಕು. ಹೆಚ್ಚುವರಿ ಕೆಲಸದ ಅವಧಿಗೆ ಓಟಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಯಲಿದೆ.
ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಾರಿಗೆ ಇಲಾಖೆ ನೌಕರರು ಈ ಬಾರಿ ಯಾವುದೇ ಕಾರಣಕ್ಕೂ ಬೇಡಿಕೆ ಈಡೇರುವವರೆಗೂ ನಮ್ಮ ಮುಷ್ಕರ ನಿಲ್ಲಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಜನತೆಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಹೊಸ ವರ್ಷಾಚರಣೆ ಆಚರಣೆಗೆ ದೂರದ ಊರುಗಳಿಗೆ ತೆರಳುವವರು ಯೋಚನೆ ಮಾಡಬೇಕಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…