ಕಾರವಾರ: ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಆರಗ ಜ್ಞಾನೇಂದ್ರ ಅವರ ಪಿಎಯಾದ ಗಣಪತಿ ವಿ.ಭಟ್ಟನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪೊಲೀಸ್ ಇಲಾಖೆಯ ಹಲವು ಅಧಿಕಾರಿಗಳ ಟ್ರಾನ್ಸ್ಫರ್ ಹಾಗೂ ಇತರ ಡೀಲಿಂಗ್ಗಳಲ್ಲಿ ಸಕ್ರಿಯವಾಗಿದ್ದ ಎಂಬ ಬಗ್ಗೆ ತಿಳಿದು ಬಂದಿದೆ.
ಗಣಪತಿ ವಿ.ಭಟ್ ಅಕ್ರಮ ಚಟುವಟಿಕೆಯಿಂದ ಆಸ್ತಿ ಸಂಪಾದಿಸಿದ್ದ, ನಿನ್ನೆ ಬೆಂಗಳೂರಿನಿಂದ ಸಿದ್ಧಾಪುರದ ಹೇಗೂರಿಗೆ ಆಗಮಿಸಿದ್ದ ಸಿಐಡಿ ಅಧಿಕಾರಿಗಳು ಅರೋಪಿ ಗಣಪತಿಯನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿಯೇ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಗಣಪತಿ ವಿ.ಭಟ್ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಶಿರಸಿ ಮೂಲದ ವ್ಯಕ್ತಿ ಗಣಪತಿ ಭಟ್ರನ್ನು ಎಲ್ಲಾ ಹಂತದಲ್ಲಿ ತನಿಖೆ ಮಾಡಲಾಗುತ್ತಿದೆ. ಹೆಸರಿನ ವಿಚಾರದಲ್ಲಿ ಕೆಲ ಗೊಂದಲ ಆಗಿತ್ತು. ನನ್ನ ಕಚೇರಿಯಲ್ಲೂ ಗಣಪತಿ ಭಟ್ ಅಂತ ಇದ್ದಾರೆ. ಹೀಗಾಗಿ ಗೊಂದಲ ಆಗಿದೆ, ಸದ್ಯ ಶಿರಸಿಯಲ್ಲಿ ಗಣಪತಿ ಭಟ್ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ರು.
ಪರೀಕ್ಷಾ ಅಕ್ರಮದ ಬಗ್ಗೆ ಚಾರ್ಜ್ ಶೀಟ್ ಸಲ್ಲಿಸಿರುವ ಸಿಐಡಿ ಕಲಬುರಗಿ: 545 ಪಿಎಸ್ಐ ನೇಮಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪರೀಕ್ಷಾ ಅಕ್ರಮದ ಬಗ್ಗೆ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ ನಗರದ ಸ್ಥಾನಜೋತಿ ಇಂಗ್ಲಿಷ್ ಶಾಲೆಯಲ್ಲಿನ ಅಕ್ರಮಕ್ಕೆ ಸಂಬಂಧ 34 ಅರೋಪಿಗಳ ವಿರುದ್ಧ 5 ದಿನದ ಹಿಂದೆ ಕಲಬುರಗಿ 3ನೇ JMFC ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ, ಚಾರ್ಜ್ಶೀಟ್ನಲ್ಲಿ ಅನೇಕ ಶಾಕಿಂಗ್ ಸಂಗತಿಗಳು ಉಲ್ಲೇಖಿಸಲಾಗಿದ್ದು, ಶಾಸಕ ವೈ.ಎಂ.ಪಾಟೀಲ್ ನಂತ್ರ ಅರುಣ್ ಕುಮಾರ್, ಶಾಸಕರ ಸಹೋದರ ಎನ್.ವೈ.ಪಾಟೀಲ್ ಹೆಸರನ್ನು ಕಿಂಗ್ಪಿನ್ ರುದ್ರಗೌಡ ಪಾಟೀಲ್ ಪ್ರಸ್ತಾಪ ಮಾಡಿದರು. ಶಾಸಕರ ಗನ್ ಮ್ಯಾನ್ ಶಯ್ಯಾಗಿ ದೇಸಾಯಿ ಪರ ಡೀಲ್ ಮಾಡಿದ್ದು, ಅರುಣ್ ಕುಮಾರ್ ಪಾಟೀಲ್ ತನಗೆ ಕರೆ ಮಾಡಿದ್ದರು. ದೇನಾಯಿಗೆ ಪರೀಕ್ಷೆಯಲ್ಲಿ ಪಾಸ್ ಮಾಡಿಸಲು ಹೇಳಿದರು. ಎಸ್.ವೈ.ಪಾಟೀಲ್ ಜೊತೆ ಮಾತನಾಡಿ 30 ಲಕ್ಷಕ್ಕೆ ಡೀಲ್ ಮಾಡಲಾಗಿದೆ ಎಂದು ಜಾರ್ಜ್ ಶೀಟ್ನಲ್ಲಿನ ಸ್ವಖುಷಿ ಹೇಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ.