ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮೈಸೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಭಾರೀ ಗಾಳಿ, ಗುಡುಗು ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದೆಡೆ ಗುಡುಗು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ನಿನ್ನೆ ( ಮೇ 11 ) ಹುಬ್ಬಳ್ಳಿ – ಧಾರಾವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಮರಗಳು ರಸ್ತೆಗಳಿಗೆ ಉರುಳಿಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ನಿನ್ನೆ ಬೆಳಗ್ಗೆ 8.30ಕ್ಕೆ ಅನ್ವಯಿಸುವಂತೆ ಹಿಂದಿನ 24 ಗಂಟೆಗಳಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ( 9 ಸೆ.ಮೀ ) ಅತಿಹೆಚ್ಚು ಮಳೆಯಾಗಿದ್ದು, ಚಿಕ್ಕಮಗಳೂರು, ಮಾಗಡಿ, ನಾಪೋಕ್ಲು, ಕುಶಾಲನಗರ, ಅಜ್ಜಂಪುರ, ಪಾವಗಡ ಮತ್ತು ಚಿತ್ರದುರ್ಗದಲ್ಲಿಯೂ ಉತ್ತಮ ಮಳೆಯಾಗಿದೆ.
ಹವಾಮಾನ ಇಲಾಖೆ ಮೇ 15ರವರೆಗೂ ಕೊಡಗು, ದಕ್ಷಿಣ ಕನ್ನಡ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ್ದು, ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…