ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮೈಸೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಭಾರೀ ಗಾಳಿ, ಗುಡುಗು ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದೆಡೆ ಗುಡುಗು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ನಿನ್ನೆ ( ಮೇ 11 ) ಹುಬ್ಬಳ್ಳಿ – ಧಾರಾವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಮರಗಳು ರಸ್ತೆಗಳಿಗೆ ಉರುಳಿಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ನಿನ್ನೆ ಬೆಳಗ್ಗೆ 8.30ಕ್ಕೆ ಅನ್ವಯಿಸುವಂತೆ ಹಿಂದಿನ 24 ಗಂಟೆಗಳಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ( 9 ಸೆ.ಮೀ ) ಅತಿಹೆಚ್ಚು ಮಳೆಯಾಗಿದ್ದು, ಚಿಕ್ಕಮಗಳೂರು, ಮಾಗಡಿ, ನಾಪೋಕ್ಲು, ಕುಶಾಲನಗರ, ಅಜ್ಜಂಪುರ, ಪಾವಗಡ ಮತ್ತು ಚಿತ್ರದುರ್ಗದಲ್ಲಿಯೂ ಉತ್ತಮ ಮಳೆಯಾಗಿದೆ.
ಹವಾಮಾನ ಇಲಾಖೆ ಮೇ 15ರವರೆಗೂ ಕೊಡಗು, ದಕ್ಷಿಣ ಕನ್ನಡ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ್ದು, ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…