ರಾಜ್ಯ

ದ್ವಿಭಾಷಾ ನೀತಿಗೆ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ ಸಲ್ಲಿಸಿದ ಕನ್ನಡ ರಕ್ಷಣಾ ವೇದಿಕೆ

ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ನಿಯೋಗವಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಕನ್ನಡವನ್ನು ಮೊದಲ ಭಾಷೆಯನ್ನಾಗಿ ಉಳಿಸಿಕೊಂಡು ನಂತರ ಜಾಗತಿಕ ಭಾಷೆಯಾಗಿರುವ ಇಂಗ್ಲೀಷ್ ಕಲಿಕೆಗೆ ಅವಕಾಶ ಕಲ್ಪಿಸಬೇಕು. ಈ ಎರಡೂ ಭಾಷೆಗಳ ಕಲಿಕೆಯಿಂದ ಮಕ್ಕಳಲ್ಲಿನ ಪ್ರಾವಿಣ್ಯತೆ, ಆಲೋಚನೆ, ಗ್ರಹಿಕೆ ಹಾಗೂ ಅಭಿವ್ಯಕ್ತಿಯ ಶಕ್ತಿ ವೃದ್ಧಿಸುತ್ತದೆ. ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸ ಮೌಲ್ಯಗಳ ಅರಿವು ಮೂಡಿಸಿದರೆ ಇಂಗ್ಲಿಷ್ ವೃತ್ತಿಪರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವಿವರಿಸಲಾಗಿದೆ.

ಹಲವು ಮುಂದುವರಿದ ರಾಷ್ಟ್ರಗಳು ದ್ವಿಭಾಷಾ ಶಿಕ್ಷಣವನ್ನು ಉತ್ತೇಜಿಸುತ್ತದೆ. ಹೀಗಾಗಿ ಕರ್ನಾಟಕದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ದ್ವಿಭಾಷಾ ಪದ್ಧತಿಯನ್ನು ಜಾರಿಗೆ ತರಬೇಕು. ಕನ್ನಡ ಕಲಿಸುವ ವ್ಯವಸ್ಥೆಯನ್ನು ಪಠ್ಯಪುಸ್ತಕಗಳ ಸಹಯೋಗದಿಂದ ಸದೃಢಗೊಳಿಸಬೇಕು. ದ್ವಿಭಾಷಾ ನೀತಿಯ ಬಗ್ಗೆ ಸ್ಪಷ್ಟ ನಿರ್ಧಾರ ಮತ್ತು ಅನುಷ್ಟಾನ ಚಟುವಟಿಕೆಗಳ ಪಟ್ಟಿ ಪ್ರಕಟಿಸಬೇಕು. ನಮ್ಮ ಕರ್ನಾಟಕ, ನಮ್ಮ ಭಾಷೆ, ನಮ್ಮ ಭವಿಷ್ಯ ಧ್ಯೇಯದೊಂದಿಗೆ ದ್ವಿಭಾಷಾ ನೀತಿಯನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಗಿದೆ.

ನಿಯೋಗ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೂ ಕೂಡ ದ್ವಿಭಾಷಾ ನೀತಿಯ ಪರವಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

43 mins ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

54 mins ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

3 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

3 hours ago

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…

3 hours ago

ಓದುಗರ ಪತ್ರ | ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸಿ

ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…

3 hours ago