ರಾಜ್ಯ

ದ್ವಿಭಾಷಾ ನೀತಿಗೆ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ ಸಲ್ಲಿಸಿದ ಕನ್ನಡ ರಕ್ಷಣಾ ವೇದಿಕೆ

ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ನಿಯೋಗವಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಕನ್ನಡವನ್ನು ಮೊದಲ ಭಾಷೆಯನ್ನಾಗಿ ಉಳಿಸಿಕೊಂಡು ನಂತರ ಜಾಗತಿಕ ಭಾಷೆಯಾಗಿರುವ ಇಂಗ್ಲೀಷ್ ಕಲಿಕೆಗೆ ಅವಕಾಶ ಕಲ್ಪಿಸಬೇಕು. ಈ ಎರಡೂ ಭಾಷೆಗಳ ಕಲಿಕೆಯಿಂದ ಮಕ್ಕಳಲ್ಲಿನ ಪ್ರಾವಿಣ್ಯತೆ, ಆಲೋಚನೆ, ಗ್ರಹಿಕೆ ಹಾಗೂ ಅಭಿವ್ಯಕ್ತಿಯ ಶಕ್ತಿ ವೃದ್ಧಿಸುತ್ತದೆ. ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸ ಮೌಲ್ಯಗಳ ಅರಿವು ಮೂಡಿಸಿದರೆ ಇಂಗ್ಲಿಷ್ ವೃತ್ತಿಪರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವಿವರಿಸಲಾಗಿದೆ.

ಹಲವು ಮುಂದುವರಿದ ರಾಷ್ಟ್ರಗಳು ದ್ವಿಭಾಷಾ ಶಿಕ್ಷಣವನ್ನು ಉತ್ತೇಜಿಸುತ್ತದೆ. ಹೀಗಾಗಿ ಕರ್ನಾಟಕದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ದ್ವಿಭಾಷಾ ಪದ್ಧತಿಯನ್ನು ಜಾರಿಗೆ ತರಬೇಕು. ಕನ್ನಡ ಕಲಿಸುವ ವ್ಯವಸ್ಥೆಯನ್ನು ಪಠ್ಯಪುಸ್ತಕಗಳ ಸಹಯೋಗದಿಂದ ಸದೃಢಗೊಳಿಸಬೇಕು. ದ್ವಿಭಾಷಾ ನೀತಿಯ ಬಗ್ಗೆ ಸ್ಪಷ್ಟ ನಿರ್ಧಾರ ಮತ್ತು ಅನುಷ್ಟಾನ ಚಟುವಟಿಕೆಗಳ ಪಟ್ಟಿ ಪ್ರಕಟಿಸಬೇಕು. ನಮ್ಮ ಕರ್ನಾಟಕ, ನಮ್ಮ ಭಾಷೆ, ನಮ್ಮ ಭವಿಷ್ಯ ಧ್ಯೇಯದೊಂದಿಗೆ ದ್ವಿಭಾಷಾ ನೀತಿಯನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಗಿದೆ.

ನಿಯೋಗ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೂ ಕೂಡ ದ್ವಿಭಾಷಾ ನೀತಿಯ ಪರವಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

6 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

6 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

7 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

7 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

7 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

8 hours ago