ರಾಜ್ಯ

ದ್ವಿಭಾಷಾ ನೀತಿಗೆ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ ಸಲ್ಲಿಸಿದ ಕನ್ನಡ ರಕ್ಷಣಾ ವೇದಿಕೆ

ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ನಿಯೋಗವಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಕನ್ನಡವನ್ನು ಮೊದಲ ಭಾಷೆಯನ್ನಾಗಿ ಉಳಿಸಿಕೊಂಡು ನಂತರ ಜಾಗತಿಕ ಭಾಷೆಯಾಗಿರುವ ಇಂಗ್ಲೀಷ್ ಕಲಿಕೆಗೆ ಅವಕಾಶ ಕಲ್ಪಿಸಬೇಕು. ಈ ಎರಡೂ ಭಾಷೆಗಳ ಕಲಿಕೆಯಿಂದ ಮಕ್ಕಳಲ್ಲಿನ ಪ್ರಾವಿಣ್ಯತೆ, ಆಲೋಚನೆ, ಗ್ರಹಿಕೆ ಹಾಗೂ ಅಭಿವ್ಯಕ್ತಿಯ ಶಕ್ತಿ ವೃದ್ಧಿಸುತ್ತದೆ. ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸ ಮೌಲ್ಯಗಳ ಅರಿವು ಮೂಡಿಸಿದರೆ ಇಂಗ್ಲಿಷ್ ವೃತ್ತಿಪರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವಿವರಿಸಲಾಗಿದೆ.

ಹಲವು ಮುಂದುವರಿದ ರಾಷ್ಟ್ರಗಳು ದ್ವಿಭಾಷಾ ಶಿಕ್ಷಣವನ್ನು ಉತ್ತೇಜಿಸುತ್ತದೆ. ಹೀಗಾಗಿ ಕರ್ನಾಟಕದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ದ್ವಿಭಾಷಾ ಪದ್ಧತಿಯನ್ನು ಜಾರಿಗೆ ತರಬೇಕು. ಕನ್ನಡ ಕಲಿಸುವ ವ್ಯವಸ್ಥೆಯನ್ನು ಪಠ್ಯಪುಸ್ತಕಗಳ ಸಹಯೋಗದಿಂದ ಸದೃಢಗೊಳಿಸಬೇಕು. ದ್ವಿಭಾಷಾ ನೀತಿಯ ಬಗ್ಗೆ ಸ್ಪಷ್ಟ ನಿರ್ಧಾರ ಮತ್ತು ಅನುಷ್ಟಾನ ಚಟುವಟಿಕೆಗಳ ಪಟ್ಟಿ ಪ್ರಕಟಿಸಬೇಕು. ನಮ್ಮ ಕರ್ನಾಟಕ, ನಮ್ಮ ಭಾಷೆ, ನಮ್ಮ ಭವಿಷ್ಯ ಧ್ಯೇಯದೊಂದಿಗೆ ದ್ವಿಭಾಷಾ ನೀತಿಯನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಗಿದೆ.

ನಿಯೋಗ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೂ ಕೂಡ ದ್ವಿಭಾಷಾ ನೀತಿಯ ಪರವಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

47 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

1 hour ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

1 hour ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago