ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶ ದ್ವಾರದ ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಬೇಕು.
ಸಾಮಾನ್ಯವಾಗಿ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆ ಮುಖ ಮಾಡಿ ಕುಳಿತುಕೊಳ್ಳುತ್ತಾರೆ. ಹೀಗೆ ಕುಳಿತುಕೊಂಡರೆ ಅಕ್ರಮ ಎಸಗುವ ವಿದ್ಯಾರ್ಥಿಗಳು ವಿಚಕ್ಷಣ ದಳ ಬಂದ ತಕ್ಷಣ ಎಚ್ಚೆತ್ತುಕೊಳ್ಳುತ್ತಾರೆ. ಹಾಗಾಗಿ ಮಂಡಳಿಯ ಪ್ರವೇಶ ದ್ವಾರದ ವಿರುದ್ಧ ದಿಕ್ಕಿಗೆ ಮುಖ ಮಾಡಿ ಕುಳಿತುಕೊಳ್ಳಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲು ತಿಳಿಸಿದೆ.
ವಿದ್ಯಾರ್ಥಿಗಳು ಬಯಲಿನಲ್ಲಿ ಕುಳಿತು ಪರೀಕ್ಷೆ ಬರೆಯಲು ಅವಕಾಶ ಇರಬಾರದು. ಅಹಿತಕರ ಘಟನೆ ನಡೆಯದಂತೆ ಡಿಡಿಪಿಐ ಕ್ರಮ ವಹಿಸಬೇಕು.
ಸ್ವೀಕರಿಸಿದ ಪತ್ರಿಕೆಗಳನ್ನು ಅಲ್ಮೆರಾದಲ್ಲಿಟ್ಟುಕೊಳ್ಳಬೇಕು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ಬಂಡಲ್ ಗಳು ಇರುವ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದ್ದು, ಸೂಕ್ಷ್ಮ ಕೇಂದ್ರಗಳಿಗೆ ಬೇರೆ ಶಾಲೆ ಮುಖ್ಯ ಶಿಕ್ಷಕರನ್ನು ಮುಖ್ಯ ಅಧೀಕ್ಷಕರಾಗಿ ನೇಮಕ ಮಾಡಬೇಕು. ಎಸ್ಕಾರ್ಟ್ ನಲ್ಲಿ ಪ್ರಶ್ನೆ ಪತ್ರಿಕೆ ಸಾಗಿಸಬೇಕು ಎಂದು ಹೇಳಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…